ಬೆಂಗಳೂರು :ಅಕ್ರಮವಾಗಿ ಗೋ ಸಾಗಾಟ ಆರೋಪ ಕೇಳಿ ಬಂದ ಹಿನ್ನೆಲೆ ಗುರುವಾರ ಎನ್ಜಿಒ ಸದಸ್ಯರು ಹಾಗೂ ಸ್ಥಳೀಯರ ನಡುವೆ ನಡೆದಿದ್ದ ಗಲಾಟೆ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಗೋಸಾಗಾಟ ಆರೋಪ.. ಪ್ರಕರಣ ದಾಖಲಿಸಿಕೊಂಡ ಶಿವಾಜಿನಗರ ಪೊಲೀಸರು - ಅಕ್ರಮ ಗೋ ಸಾಗಾಣಿಕೆ ಪ್ರಕರಣ
ಪರಿಸ್ಥಿತಿ ಹದಗೆಡುವ ಮುನ್ನವೇ ಪೊಲೀಸರು ಸ್ಥಳಕ್ಕೆ ಹೋಗಿ ತಿಳಿಗೊಳಿಸಿದ್ದರು. ಈ ಘಟನೆ ಸಂಬಂಧ ಸಂಜಯ್ ಕುಲಕರ್ಣಿ ಎಂಬುವರು ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ..
![ಅಕ್ರಮ ಗೋಸಾಗಾಟ ಆರೋಪ.. ಪ್ರಕರಣ ದಾಖಲಿಸಿಕೊಂಡ ಶಿವಾಜಿನಗರ ಪೊಲೀಸರು illegal-cow-transport-case-registered](https://etvbharatimages.akamaized.net/etvbharat/prod-images/768-512-8248608-thumbnail-3x2-dd.jpg)
ಶಿವಾಜಿನಗರ ಸೇರಿ ಸುತ್ತಮುತ್ತಲಿನ ಕಸಾಯಿಖಾನೆಗಳಿಗೆ ಅಕ್ರಮವಾಗಿ ಗೋವು ಸರಬರಾಜು ಮಾಡಲಾಗಿದೆ ಎಂದು ಗೋ ಗ್ಯಾಂಗ್ ಸಂಘಟನೆ ನಿನ್ನೆ ಕಸಾಯಿಖಾನೆ ಬಳಿ ಹೋಗಿ ಸ್ಥಳೀಯರನ್ನು ಪ್ರಶ್ನಿಸಿತ್ತು. ಈ ಸಂಬಂಧ ಸಂಘಟನೆಯ ಸದಸ್ಯರು ಹಾಗೂ ಸ್ಥಳೀಯರ ನಡುವಿನ ಮಾತಿನ ಚಕಮಕಿ ನಡೆದಿತ್ತು. ಪರಿಸ್ಥಿತಿ ಹದಗೆಡುವ ಮುನ್ನವೇ ಪೊಲೀಸರು ಸ್ಥಳಕ್ಕೆ ಹೋಗಿ ತಿಳಿಗೊಳಿಸಿದ್ದರು. ಈ ಘಟನೆ ಸಂಬಂಧ ಸಂಜಯ್ ಕುಲಕರ್ಣಿ ಎಂಬುವರು ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಶಾಂತಿ ಸಭೆ :ನಾಳೆ ಬಕ್ರೀದ್ ಹಿನ್ನೆಲೆ ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಆಯುಕ್ತ ಭಾಸ್ಕರ್ ಮುಂಜಾಗ್ರತಾ ಕ್ರಮವಾಗಿ ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದ್ದಾರೆ. ಅಲ್ಲದೆ ಆಯಾ ವಿಭಾಗ ಮಟ್ಟದಲ್ಲಿ ಡಿಸಿಪಿಗಳು ಸ್ಥಳೀಯ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.