ಬೆಂಗಳೂರು: ರಾಜ್ಯಾದ್ಯಂತ ಆಗಸ್ಟ್ 23 ರಿಂದ 9, 10ನೇ ತರಗತಿಗಳು ಆರಂಭವಾಗಲಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಇದೀಗ ತ್ವರಿತವಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕ / ಬೋಧಕೇತರ ಸಿಬ್ಬಂದಿಗೆ ಹಾಗೂ ವಿದ್ಯಾರ್ಥಿಗಳ ಕುಟುಂಬದವರಿಗೆ ಲಸಿಕೆ ನೀಡುವಂತೆ ಸರ್ಕಾರ ಇಲಾಖೆಗಳಿಗೆ ಸೂಚಿಸಿದೆ.
ಶಾಲಾರಂಭಕ್ಕೆ ಮುಹೂರ್ತ: ಶಿಕ್ಷಕರು, ವಿದ್ಯಾರ್ಥಿಗಳ ಕುಟುಂಬದವರಿಗೆ ಲಸಿಕೆ ನೀಡಲು ಸರ್ಕಾರದ ಸೂಚನೆ - schools reopen
ಇನ್ನೇನು ಕೆಲವೇ ದಿನಗಳಲ್ಲಿ 9,10ನೇ ತರಗತಿಗಳು ಆರಂಭವಾಗಲಿದ್ದು ಆದ್ಯತೆಯ ಮೇರೆಗೆ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಪೋಷಕರಿಗೆ ಕೋವಿಡ್ ಲಸಿಕೆ ನೀಡಲು ಸರ್ಕಾರ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದೆ.
![ಶಾಲಾರಂಭಕ್ಕೆ ಮುಹೂರ್ತ: ಶಿಕ್ಷಕರು, ವಿದ್ಯಾರ್ಥಿಗಳ ಕುಟುಂಬದವರಿಗೆ ಲಸಿಕೆ ನೀಡಲು ಸರ್ಕಾರದ ಸೂಚನೆ vaccination for students parents and school staff](https://etvbharatimages.akamaized.net/etvbharat/prod-images/768-512-12725749-thumbnail-3x2-zxfvet.jpg)
ಶಾಲಾರಂಭ ಹಿನ್ನೆಲೆ ಲಸಿಕಾಭಿಯಾನಕ್ಕೆ ಸೂಚನೆ
ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ತಿಳಿಸಿದ್ದು, 9ನೇ ತರಗತಿ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳ ಕೋವಿಡ್-19 ಲಸಿಕೆ ಪಡೆಯದ ತಂದೆ, ತಾಯಿ ಹಾಗೂ ಪೋಷಕರುಗಳಿಗೆ ನೀಡುವಂತೆ ಕೋರಲಾಗಿದೆ. ಇದಕ್ಕಾಗಿ ಶಾಲೆಯ ಮುಖ್ಯಸ್ಥರಿಂದ ತಂದೆ-ತಾಯಿ/ಪೋಷಕರಿಗೆ ಮಾಹಿತಿ ತಲುಪಿಸಿ ಲಸಿಕೆ ಪಡೆಯದವರ ಪಟ್ಟಿ ತಯಾರಿಸಿ ಆರೋಗ್ಯ ಇಲಾಖೆಗೆ ಮಾಹಿತಿ ಒದಗಿಸಿ ಕೊಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಲು ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ:ಕೆಲಸ ಕೊಡಿಸುವ ಸೋಗಿನಲ್ಲಿ ಯುವತಿಯರನ್ನ ಕರೆತಂದು ವೇಶ್ಯವಾಟಿಕೆ ದಂಧೆ; ರೌಡಿಶೀಟರ್ ಬಂಧನ