ಕರ್ನಾಟಕ

karnataka

ಸ್ವಯಂ ನಿವೃತ್ತಿಗೆ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅರ್ಜಿ: ರಾಜಕೀಯ ಪ್ರವೇಶ?

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸ್ವಯಂನಿವೃತ್ತಿ ಕುರಿತು ಅರ್ಜಿ ಸಲ್ಲಿಸಿರುವುದನ್ನು ಭಾಸ್ಕರ್ ರಾವ್ ಖಚಿತ ಪಡಿಸಿದ್ದಾರೆ.

By

Published : Sep 16, 2021, 3:12 PM IST

Published : Sep 16, 2021, 3:12 PM IST

IPS Officer Bhaskar rao
IPS Officer Bhaskar rao

ಬೆಂಗಳೂರು: ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ.

ಭಾಸ್ಕರ್ ರಾವ್ ಅವರ ದಿಢೀರ್ ನಿರ್ಧಾರ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ನಿವೃತ್ತಿ ಬಳಿಕ ಹಿರಿಯ ಐಪಿಎಸ್ ಅಧಿಕಾರಿ ರಾಜಕೀಯ ಪ್ರವೇಶಿಸುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ?

ಭಾಸ್ಕರ್‌ ರಾವ್ ಕಾಂಗ್ರೆಸ್ ಪಕ್ಷ ಸೇರಿ, ಬಸವನಗುಡಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ರಾವ್ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಕಳೆದ ವರ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ABOUT THE AUTHOR

...view details