ಕರ್ನಾಟಕ

karnataka

ಬೆಂಗಳೂರಲ್ಲಿ ಶಂಕಿತ ಆರೋಪಿ: 2 ವರ್ಷಗಳ ಬಳಿಕ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು

ಬೆಂಗಳೂರಲ್ಲಿ ಒಬ್ಬ ಶಂಕಿತ ಆರೋಪಿಯನ್ನು ಜಮ್ಮು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

By

Published : Jun 6, 2022, 1:35 PM IST

Published : Jun 6, 2022, 1:35 PM IST

ಬೆಂಗಳೂಲ್ಲಿ ಜಮ್ಮು ಶಂಕಿತ ಆರೋಪಿ
ಬೆಂಗಳೂಲ್ಲಿ ಜಮ್ಮು ಶಂಕಿತ ಆರೋಪಿ

ಬೆಂಗಳೂರು: ಕಾಶ್ಮೀರ ಕಣಿವೆಯಲ್ಲಿ ಉಗ್ರರು ಗುಂಡಿನ ದಾಳಿ, ಕಲ್ಲು ತೂರಾಟ ನಡೆಸಿ ಹಿಂಸಾಚಾರಕ್ಕೆ ಎಡೆ ಮಾಡಿಕೊಡುತ್ತಿದ್ದಾರೆ. ಈ ಬೆಳವಣಿಗೆ ನಡುವೆಯೇ ನಗರದಲ್ಲಿ ತಲೆಮರೆಸಿಕೊಂಡಿದ್ದ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಎನ್ನಲಾದಶಂಕಿತ ಆರೋಪಿಯನ್ನು ಜಮ್ಮು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ‌.

ಜಮ್ಮು‌ ಮೂಲದ ತಾಲಿಬ್ ಹುಸೇನ್​​ನನ್ನು‌ ಕೆಲ‌ ದಿನಗಳ ಹಿಂದೆ ಜಮ್ಮು‌ಕಾಶ್ಮೀರ ಪೊಲೀಸರು ಬೆಂಗಳೂರಿಗೆ ಬಂದು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನಗರದ ಶ್ರೀರಾಮಪುರದಲ್ಲಿ ವಾಸವಾಗಿದ್ದ ಹುಸೇನ್​ನನ್ನು ಜಮ್ಮುವಿನ ಕಿಸ್ತವಾರ್ ಠಾಣೆ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ಪ್ರಕರಣ ಸಂಬಂಧ ಹುಸೇನ್​ನನ್ನು ವಶಕ್ಕೆ ಪಡೆದುಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

(ಇದನ್ನೂ ಓದಿ: ಶಿಕ್ಷಕಿ ಕೊಲೆ ಬೆನ್ನಲ್ಲೇ ಬ್ಯಾಂಕ್ ಮ್ಯಾನೇಜರ್​ಗೆ​ ಗುಂಡಿಕ್ಕಿ ಹತ್ಯೆಗೈದ ಉಗ್ರ... ಸಿಸಿಟಿವಿಯಲ್ಲಿ ದೃಶ್ಯ ಸೆರೆ)

ABOUT THE AUTHOR

...view details