ಬೆಂಗಳೂರು:ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಸುಮಾರು 45ಕ್ಕೂ ಅಧಿಕ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ. ಈಗ ಅಲ್ಲಿನ ಪ್ರವಾಹದಲ್ಲಿ ಸಿಲುಕಿರುವ ಕನ್ನಡ ನೆರವಿಗಾಗಿ ರಾಜ್ಯ ಸರ್ಕಾರ ಹೆಲ್ಪ್ಲೈನ್ ಸ್ಥಾಪಿಸಿದೆ.
ನೆರೆಯಿಂದ ಸಿಲುಕಿಕೊಂಡಿರುವ ಕನ್ನಡಿಗರು ಹೆಲ್ಪ್ ಡೆಸ್ಕ್ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಉತ್ತರಾಖಂಡ ಅಧಿಕಾರಿಗಳಿಗೆ ಆ ಮಾಹಿತಿಯನ್ನು ರವಾನಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.