ಕರ್ನಾಟಕ

karnataka

ETV Bharat / city

ಆಧಾರರಹಿತ ವರದಕ್ಷಿಣೆ ಕಿರುಕುಳ ಆರೋಪ: ಪ್ರಕರಣ ರದ್ದುಪಡಿಸಿದ ಹೈಕೋರ್ಟ್ - ವರದಕ್ಷಿಣೆ ಪ್ರಕರಣವನ್ನು ತಿರಸ್ಕರಿಸಿದ ಹೈಕೋರ್ಟ್

ಮದುವೆಯಾಗಿ ವರ್ಷದ ಬಳಿಕ ಗಂಡನ ಮನೆಯವರು ವರದಕ್ಷಿಣೆ ಜೊತೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆ ದಾಖಲಿಸಿರುವ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ.

High Court quashed the dowry case, High Court dismissed the dowry case, High Court rejected the dowry case, Karnataka high court news, ವರದಕ್ಷಿಣೆ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್, ವರದಕ್ಷಿಣೆ ಪ್ರಕರಣವನ್ನು ವಜಾಗೊಳಿಸಿದ ಹೈಕೋರ್ಟ್, ವರದಕ್ಷಿಣೆ ಪ್ರಕರಣವನ್ನು ತಿರಸ್ಕರಿಸಿದ ಹೈಕೋರ್ಟ್, ಕರ್ನಾಟಕ ಹೈಕೋರ್ಟ್ ಸುದ್ದಿ,
ಆಧಾರರಹಿತ ವರದಕ್ಷಿಣೆ ಕಿರುಕುಳ ಆರೋಪ

By

Published : May 24, 2022, 7:23 AM IST

ಬೆಂಗಳೂರು: ಯಾವುದೇ ಸೂಕ್ತ ಆಧಾರಗಳಿಲ್ಲದಿದ್ದರೂ ಹಾಸಿಗೆ ಹಿಡಿದಿರುವ 80 ವರ್ಷದ ವೃದ್ಧೆ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ದಾವಣಗೆರೆ ಕೋರ್ಟ್​​ನಲ್ಲಿ ಪತ್ನಿ ದಾಖಲಿಸಿರುವ ಕ್ರಿಮಿನಲ್‌ ಪ್ರಕರಣದ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ಚಿತ್ರದುರ್ಗ ನಿವಾಸಿಯಾಗಿರುವ ಪತಿ ಮತ್ತು ಆತನ 7 ಮಂದಿ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.

ಪತಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪತ್ನಿ ದಾಖಲಿಸಿರುವ ಪ್ರಕರಣದಲ್ಲಿ ಸುಳ್ಳು ಆರೋಪಗಳನ್ನು ಬಿಟ್ಟರೆ ಯಾವುದೇ ಹುರುಳಿಲ್ಲ. ವರದಕ್ಷಿಣೆ ಕಿರುಕುಳಕ್ಕೆ ಸಾಕ್ಷ್ಯಗಳನ್ನೂ ನೀಡಿಲ್ಲ. ನೋಟಿಸ್ ಜಾರಿ ಮಾಡಿದ್ದರೂ ಹೈಕೋರ್ಟ್ ವಿಚಾರಣೆಯಲ್ಲಿ ಪತ್ನಿ ಭಾಗಿಯಾಗಿಲ್ಲ. ವರದಕ್ಷಿಣೆ ತಡೆ ಕಾಯ್ದೆ–1961ರ ಕಲಂ 3 ಮತ್ತು 4ರ ಅಡಿ ದೂರು ಸಲ್ಲಿಸುವಾಗ ಮುಂದೇನಾಗುತ್ತದೆ ಎಂಬುದರ ಪರಿಣಾಮಗಳನ್ನು ದೂರುದಾರ ಮಹಿಳೆ ಅವಲೋಕಿಸಿಲ್ಲ. ಇಂತಹ ಪ್ರಕರಣಗಳನ್ನು ಮುಂದುವರೆಯಲು ಬಿಟ್ಟರೆ ಕಾನೂನಿನ ದುರ್ಬಳಕೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಪೀಠ, ವಿಚಾರಣಾ ನ್ಯಾಯಾಲಯದಲ್ಲಿದ್ದ ಪ್ರಕರಣವನ್ನು ರದ್ದುಪಡಿಸಿದೆ.

ಇದನ್ನೂ ಓದಿ:ಇಡಿಯಿಂದ ಶಿಯೋಮಿ ಸಂಸ್ಥೆಯ ಬ್ಯಾಂಕ್ ಖಾತೆಗಳ ಮುಟ್ಟುಗೋಲು: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಪ್ರಕರಣದ ಹಿನ್ನೆಲೆ: ದಾವಣಗೆರೆ ನಿವಾಸಿಯಾದ 25 ವರ್ಷದ ಮಹಿಳೆ 2020ರ ಅಕ್ಟೋಬರ್ 24ರಂದು 29 ವರ್ಷದ ವ್ಯಕ್ತಿಯನ್ನು ವಿವಾಹವಾಗಿದ್ದರು. ಮದುವೆಯ ಬಳಿಕ ದಂಪತಿ ನಡುವಿನ ಸಂಬಂಧ ಹದಗೆಟ್ಟಿತ್ತು. 2021ರ ಆಗಸ್ಟ್‌ 22ರಂದು ಪೊಲೀಸರಿಗೆ ಪತ್ನಿ ದೂರು ನೀಡಿದ್ದರು. ದೂರಿನಲ್ಲಿ, ಮದುವೆ ಸಂದರ್ಭದಲ್ಲಿ ಪತಿಗೆ 5 ಲಕ್ಷ ಹಣ, ಒಡವೆ, ಇತರೆ ವಸ್ತುಗಳನ್ನು ತಮ್ಮ ಪೋಷಕರು ನೀಡಿದ್ದರು. ಅಷ್ಟು ಸಾಲದೆಂದು ಪತಿ ಕುಟುಂಬಸ್ಥರು ಮತ್ತಷ್ಟು ವರದಕ್ಷಿಣೆ ನೀಡುವಂತೆ ಕಿರುಕುಳ ನೀಡಿದ್ದರು.

ಪೋಷಕರು ಸಾಲ ಮಾಡಿ ಹಣ ಕೊಟ್ಟ ನಂತರವೂ ಕಿರುಕುಳ ಮುಂದುವರೆಸಿದರು. ಗಂಡನ ತಾಯಿ, ಅಜ್ಜಿ, ನಾದಿನಿ, ಮೈದುನ ಸೇರಿದಂತೆ ಎಲ್ಲರೂ ಹೀಯಾಳಿಸುತ್ತಿದ್ದರು. ಕುಳ್ಳಗಿದ್ದೀಯ, ಕೀಳು ಜಾತಿಗೆ ಸೇರಿದ್ದೀಯ ಎಂದೆಲ್ಲಾ ಮಾನಸಿಕ ಹಿಂಸೆ ನೀಡಿದ್ದರು. ನನ್ನ ಶೀಲ ಶಂಕಿಸಿದ ಪತಿ ಕುಡಿತದ ಚಟಕ್ಕೆ ಬಿದ್ದು ಹಲ್ಲೆ ಮಾಡುತ್ತಿದ್ದ. ಕೊಲೆ ಮಾಡಲೂ ಯತ್ನಿಸಿದ ಎಂಬುದು ಸೇರಿದಂತೆ ಸಾಲು ಸಾಲು ಆರೋಪಗಳನ್ನು ಮಾಡಿ, ಪೊಲೀಸರಿಗೆ ದೂರು ನೀಡಿದ್ದರು.

ಪತ್ನಿ ನೀಡಿದ್ದ ದೂರಿನ ಮೇರೆಗೆ ದಾವಣಗೆರೆ ಮಹಿಳಾ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 498-ಎ, 323, 504, 506, 307, 313, 354, 114, 34 ಹಾಗೂ ವರದಕ್ಷಿಣೆ ತಡೆ ಕಾಯ್ದೆ-1961ರ ಸೆಕ್ಷನ್ 3, 4ರ ಅಡಿ ಎಫ್ಐಆರ್ ದಾಖಲಿಸಿದ್ದರು. ಬಳಿಕ, ತನಿಖೆ ನಡೆಸಿ ದಾವಣಗೆರೆಯ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆ ಬಳಿಕ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪತಿ ಹಾಗೂ ಆತನ ಕುುಟಂಬ ಸದಸ್ಯರು ಹೈಕೋರ್ಟ್ ಮೊರೆ ಹೋಗಿದ್ದರು.

ABOUT THE AUTHOR

...view details