ಬೆಂಗಳೂರು: ರಾಜ್ಯ ಸಚಿವ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಆದೇಶಿಸಲಾಗಿದೆ.
ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ವೈರಾಣುವಿನ ನಿಯಂತ್ರಣಕ್ಕೆ ಅನುಕೂಲವಾಗುವಂತೆ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸೂಕ್ತ ಆದೇಶವನ್ನು ಹೊರಡಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸೂಚಿಸಿದ್ದರು.