ಬೆಂಗಳೂರು :ಪ್ರೊಸ್ಟೇಟ್ ಹಾಗೂ ಸ್ತನ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಹೊಸ ಯೋಜನೆ ಆರಂಭಿಸಲಾಗಿದೆ ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ.ಸಿ.ರಾಮಚಂದ್ರ ತಿಳಿಸಿದರು.
ಕಿದ್ವಾಯಿ ಆಸ್ಪತ್ರೆಯಲ್ಲಿ ಪ್ರೊಸ್ಟೇಟ್ ಹಾಗೂ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ - ಕಿದ್ವಾಯಿ ಆಸ್ಪತ್ರೆಯಲ್ಲಿ ಹೊಸ ಯೋಜನೆ
ವಿಶ್ವಮಟ್ಟದ ಸೌಲಭ್ಯಗಳನ್ನು ಒಳಗೊಂಡಿರುವ ಈ ಆಸ್ಪತ್ರೆಯಲ್ಲಿ ಪ್ರತಿದಿನ 1200 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪೆಟ್ ಸ್ಕ್ಯಾನ್ ಸೇರಿ ಪ್ರತಿ ಸೌಕರ್ಯಗಳನ್ನು ಒದಗಿಸಲಾಗಿದೆ..
![ಕಿದ್ವಾಯಿ ಆಸ್ಪತ್ರೆಯಲ್ಲಿ ಪ್ರೊಸ್ಟೇಟ್ ಹಾಗೂ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ dr. c ramchandra pressmeet](https://etvbharatimages.akamaized.net/etvbharat/prod-images/768-512-10505137-thumbnail-3x2-bengaluru.jpg)
ಬೆಂಗಳೂರು
ಕಿದ್ವಾಯಿ ಆಸ್ಪತ್ರೆ ವೈದ್ಯರಿಂದ ಮಾಹಿತಿ..
ನಗರದಲ್ಲಿ ಮಾತನಾಡಿದ ಅವರು, ಪ್ರೊಸ್ಟೇಟ್ ಕ್ಯಾನ್ಸರ್ ಬಗ್ಗೆ ಅರಿವು ಹಾಗೂ ಹಣಕಾಸಿನ ಅನುಕೂಲತೆಗಳನ್ನು ಒದಗಿಸಿಕೊಡುವುದು ಇದರ ಮುಖ್ಯ ಉದ್ದೇಶ. ಈ ಆಸ್ಪತ್ರೆಗೆ ಬಂದವರು ಹಣಕಾಸಿನ ಸಮಸ್ಯೆಯಿಂದ ಚಿಕಿತ್ಸೆ ಪಡೆಯದೇ ಹಿಂತಿರುಗಬಾರದು. ಹೀಗಾಗಿ, ಹೊಸ ಯೋಜನೆ ರೂಪಿಸಲಾಗಿದೆ ಎಂದರು.
ವಿಶ್ವಮಟ್ಟದ ಸೌಲಭ್ಯಗಳನ್ನು ಒಳಗೊಂಡಿರುವ ಈ ಆಸ್ಪತ್ರೆಯಲ್ಲಿ ಪ್ರತಿದಿನ 1200 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪೆಟ್ ಸ್ಕ್ಯಾನ್ ಸೇರಿ ಪ್ರತಿ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೌಲಭ್ಯಗಳನ್ನು ಹೆಚ್ಚಿಸಲಾಗುವುದು ಎಂದರು.