ಕರ್ನಾಟಕ

karnataka

By

Published : May 9, 2022, 8:33 AM IST

ETV Bharat / city

ಮೆಟ್ರೋ ಪಿಲ್ಲರ್​​ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: 25 ಜನರಿಗೆ ಗಾಯ, ನಾಲ್ವರು ಗಂಭೀರ

ಬೆಂಗಳೂರಿನಲ್ಲಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್​​ಆರ್​​ಟಿಸಿ ಬಸ್ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

KSRTC bus collides with Metro Pillar in  Bengaluru
ಮೆಟ್ರೋ ಪಿಲ್ಲರ್​​ಗೆ ಕೆಎಸ್​​ಆರ್​​ಟಿಸಿ ಬಸ್​​ ಡಿಕ್ಕಿ

ಬೆಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಕೆಎಸ್​​ಆರ್​​ಟಿಸಿ ಬಸ್ ಮೈಸೂರು ರಸ್ತೆಯ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ ಹೊಡೆದಿರುವ ಘಟನೆ ತಡರಾತ್ರಿ ನಡೆದಿದೆ. ಮಡಿಕೇರಿಯಿಂದ ನಗರಕ್ಕೆ ಬರುವಾಗ ಮೈಸೂರು ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಳಿ ದುರ್ಘಟನೆ ಸಂಭವಿಸಿತು.

ಮೆಟ್ರೋ ಪಿಲ್ಲರ್​​ಗೆ ಕೆಎಸ್​​ಆರ್​​ಟಿಸಿ ಬಸ್​​ ಡಿಕ್ಕಿ ಹೊಡೆದಿರುವುದು.

ಬಸ್​​ನಲ್ಲಿ 45 ಜನ ಪ್ರಯಾಣ ಮಾಡುತ್ತಿದ್ದರು. 25 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೆಟ್ರೋ ಪಿಲ್ಲರ್​​ಗೆ ಕೆಎಸ್​​ಆರ್​​ಟಿಸಿ ಬಸ್​​ ಡಿಕ್ಕಿ

ಇದನ್ನೂ ಓದಿ:ಮದ್ಯದ ಅಮಲಿನಲ್ಲಿ ಬೈದಿದಕ್ಕೆ ಇಟ್ಟಿಗೆಯಿಂದ ಜಜ್ಜಿ ವ್ಯಕ್ತಿಯ ಕೊಲೆ

ABOUT THE AUTHOR

...view details