ಬೆಂಗಳೂರು:ಉಪ ಚುನಾವಣೆ ಬಹಿರಂಗ ಪ್ರಚಾರ ನಾಳೆಗೆ ಅಂತ್ಯವಾಗಲಿದ್ದು, ಮಹಾಲಕ್ಷ್ಮೀ ಲೇಔಟ್ನಲ್ಲಿ ಚುನಾವಣಾ ಕಣ ರಂಗೇರಿದೆ. ಕೊನೆ ಹಂತದಲ್ಲಿ ಮತದಾರರನ್ನ ಸೆಳೆಯಲು ಕೈ ಅಭ್ಯರ್ಥಿ ಶಿವರಾಜ್ರಿಂದ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸಲಾಯಿತು.
ಕುರುಬರಹಳ್ಳಿಯ ಜೆ.ಸಿ ನಗರದಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ರಾಮಲಿಂಗಾರೆಡ್ಡಿ, ಹೆಚ್.ಎಂ.ರೇವಣ್ಣ, ಈಶ್ವರ್ ಖಂಡ್ರೆ ಸೇರಿದಂತೆ ಇತರರು ಭಾಗಿಯಾಗಿದ್ದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಈ ಚುನಾವಣೆ ಯಾವ ಕಾರಣಕ್ಕೆ ಬಂತು ಅಂತ ನಿಮಗೆ ಗೊತ್ತಿದೆ. ಗೋಪಾಲಯ್ಯ ಜೆಡಿಎಸ್ನಿಂದ ಗೆದ್ದಿದ್ದರು. ಜಾತ್ಯಾತೀತವಾಗಿ ಕೆಲಸ ಮಾಡ್ತೀನಿ ಅಂತ ಮತ ಕೇಳಿ ಗೆದ್ದಿದ್ರು. ಆದ್ರೆ ಈಗ ಅದೆಲ್ಲವನ್ನು ಗಾಳಿಗೆ ತೂರಿ ಅಧಿಕಾರದ ಆಸೆಯಿಂದ, ಐಟಿ, ಇಡಿ ಭಯದಿಂದ ಪಕ್ಷಾಂತರಗೊಂಡಿದ್ದಾರೆ ಎಂದರು.