ಕರ್ನಾಟಕ

karnataka

ETV Bharat / city

ಸಿದ್ದು ನಿವಾಸದಲ್ಲಿ ಸಭೆ: ಪರಿಷತ್ ಸಭಾಪತಿ ಸ್ಥಾನಕ್ಕೆ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನ? - ವಿಧಾನ ಪರಿಷತ್ ಸಭಾಪತಿ ಚುನಾವಣೆ

ವಿಧಾನ ಪರಿಷತ್ ಸಭಾಪತಿ ಚುನಾವಣೆ ವಿಚಾರ ಕುರಿತು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಬೆಂಗಳೂರು ಶಾಸಕರು ಸಭೆ ನಡೆಸಿದರು.

ಸಿದ್ದು ನಿವಾಸ
ಸಿದ್ದು ನಿವಾಸ

By

Published : Feb 7, 2021, 7:04 PM IST

Updated : Feb 7, 2021, 7:24 PM IST

ಬೆಂಗಳೂರು: ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬೆಂಗಳೂರು ಶಾಸಕರು ಸಭೆ ನಡೆಸಿದ್ದಾರೆ.

ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಂಡೂರಾವ್, ಪರಿಷತ್ ಸದಸ್ಯ ಪಿ.ಆರ್. ರಮೇಶ್ ಸೇರಿದಂತೆ ಬೆಂಗಳೂರು ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಭಾಗಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಬಿಬಿಎಂಪಿ ಚುನಾವಣಾ ತಯಾರಿ, ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ವಿಧಾನ ಪರಿಷತ್ ಸಭಾಪತಿ ಚುನಾವಣೆ ವಿಚಾರ ಕೂಡ ಇದೇ ಸಂದರ್ಭ ಪ್ರಸ್ತಾಪವಾಗಿದ್ದು, ಕಾಂಗ್ರೆಸ್​ನಿಂದ ಪರಿಷತ್ ಸಭಾಪತಿ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ. ಪರಿಷತ್ ಹಿರಿಯ ಸದಸ್ಯ ಹಾಗೂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಸೀರ್ ಅಹ್ಮದ್ ಅವರನ್ನು ಕಾಂಗ್ರೆಸ್​ನಿಂದ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

ಪರಿಷತ್​ನಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಮತ್ತು ಬಿಜೆಪಿ ಟೀಂ ಅನ್ನೋದನ್ನು ತೋರಿಸಲು ಇದು ಒಳ್ಳೆಯ ಅವಕಾಶ. ಪರಿಷತ್​ನಲ್ಲಿ ಸಭಾಪತಿ ಸ್ಥಾನ ಗೆಲ್ಲಲು ನಂಬರ್ ಕೊರತೆ ಇದ್ದರೂ ಸಹ ಅಭ್ಯರ್ಥಿ ಕಣಕ್ಕಿಳಿಸೋಣ. ಸ್ಪರ್ಧೆ ಇಲ್ಲದೆ ಅವಿರೋಧ ಆಯ್ಕೆ ಆಗುವುದು ಸರಿಯಲ್ಲ. ಸೋಲು ಖಚಿತವಿದ್ದರೂ ನಾವು ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ಈಗಲೂ ಅಭ್ಯರ್ಥಿಯನ್ನು ಕಣಕ್ಕಿಳಿಸೋಣ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿದ್ದರಾಮಯ್ಯ ಭೇಟಿ ಮಾಡಿದ ರಕ್ಷಾ

ರಕ್ಷಾ ರಾಮಯ್ಯ ಭೇಟಿ:

ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಕ್ಷಾ ರಾಮಯ್ಯ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಇದೇ ವೇಳೆ ರಕ್ಷಾ ರಾಮಯ್ಯ ಅವರನ್ನು ಸಿದ್ದರಾಮಯ್ಯ ಅಭಿನಂದಿಸಿ ಶುಭ ಹಾರೈಸಿದರು.

Last Updated : Feb 7, 2021, 7:24 PM IST

ABOUT THE AUTHOR

...view details