ಕರ್ನಾಟಕ

karnataka

ETV Bharat / city

ವಾರದೊಳಗೆ ರಸ್ತೆ ಗುಂಡಿ ಮುಚ್ಚಿ: ಅಧಿಕಾರಿಗಳಿಗೆ ಸಚಿವ ಆರ್​.ಅಶೋಕ್ ಸೂಚನೆ - Minister Ashok held a meeting of various departments in bengalure

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿದ ಸಚಿವ ಅಶೋಕ್, ಕ್ಷೇತ್ರದ ಕುಂದು-ಕೊರತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದರು.‌

ಆರ್​. ಅಶೋಕ್
ಆರ್​. ಅಶೋಕ್

By

Published : Oct 28, 2021, 7:17 AM IST

ಬೆಂಗಳೂರು: ಒಂದು ವಾರದೊಳಗೆ ಪದ್ಮನಾಭ ನಗರ ಕ್ಷೇತ್ರದಲ್ಲಿರುವ ರಸ್ತೆಗುಂಡಿ​ಗಳನ್ನು ಮುಚ್ಚಬೇಕು, ಸಮಸ್ಯೆ ಬಗೆಹರಿಯದಿದ್ದರೆ ಎಲ್ಲರನ್ನೂ ಕಪ್ಪುಪಟ್ಟಿಗೆ ಸೇರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಖಡಕ್‌ ಸೂಚನೆ ಕೊಟ್ಟಿದ್ದಾರೆ.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿದ ಅಶೋಕ್, ಕ್ಷೇತ್ರದ ಕುಂದು-ಕೊರತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದರು.‌ ಗಣೇಶ ಮಂದಿರ, ಪದ್ಮನಾಭನಗರ, ಕುಮಾರಸ್ವಾಮಿ ಬಡಾವಣೆ, ಚಿಕ್ಕಲ್ಲಸಂದ್ರ ಮುಂತಾದ ಕಡೆಗಳಲ್ಲಿ ಆಗುತ್ತಿರುವ ಕಸ ವಿಲೇವಾರಿ ಸಮಸ್ಯೆ ಕುರಿತು ಚರ್ಚಿಸಿದ ಸಚಿವರು, ಹತ್ತು ದಿನಗಳೊಳಗೆ ಎಲ್ಲಾ ಸಮಸ್ಯೆ ಬಗೆಹರಿಯಬೇಕು. ಅಲ್ಲಲ್ಲಿ ಬಿದ್ದಿರುವ ಮರಗಳು, ಕಟ್ಟಡದ ತ್ಯಾಜ್ಯಗಳನ್ನು ಬೇಗ ವಿಲೇವಾರಿ ಮಾಡಬೇಕು. ನಾನು ಮತ್ತೊಮ್ಮೆ ಪರಿಶೀಲನಾ ಸಭೆ ನಡೆಸುತ್ತೇನೆ. ಅನಗತ್ಯವಾಗಿ ಮಂಜೂರಾಗಿರುವ ಆಟೋ, ಟಿಪ್ಪರ್​ಗಳನ್ನು ತಕ್ಷಣ ರದ್ದು‌ಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್​ನಿಂದ ಮೃತಪಟ್ಟವರಲ್ಲಿ 653 ಜನರು ಪರಿಹಾರಕ್ಕೆ ಅರ್ಹರು. ಅದರಲ್ಲಿ 103 ಜನರ ಅರ್ಜಿ ಈಗಾಗಲೇ ಸ್ವೀಕೃತಿ‌ ಆಗಿದೆ. ಉಳಿದ ಅರ್ಜಿಗಳಿಗೆ ಶೀಘ್ರವೇ ಅಂತಿಮ ರೂಪ ನೀಡುತ್ತೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬೆಸ್ಕಾಂನವರು ಪೋಲ್​ಗಳನ್ನು ವ್ಯವಸ್ಥಿತವಾಗಿ ಮುಚ್ಚಿಸದೇ ಇರುವುದರಿಂದ ಸಾಕಷ್ಟು ಸವಾರರು ಬಿದ್ದು ಅನಾಹುತಗಳಾಗುತ್ತಿವೆ. ಇಲಾಖೆಗಳ ಸಮನ್ವಯತೆ ಕೊರತೆಯಿಂದ ರಸ್ತೆಗಳು ಹಾಳಾಗುತ್ತಿದೆ. ಸಾರ್ವಜನಿಕ ಹಣವೂ ಪೋಲಾಗುತ್ತಿದೆ. ಇದಕ್ಕೆ ಹೊಸ ವ್ಯವಸ್ಥೆ ತರಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕ್ರಿಮಿನಲ್ ಮೊಕದ್ದಮೆಗೆ ಸೂಚನೆ:

ಬನಶಂಕರಿ ಬಸ್ ನಿಲ್ದಾಣದ ಒಳಚರಂಡಿ ಪೈಪ್​ಗಳನ್ನು ಜನವಸತಿ ಪ್ರದೇಶದ ಕಡೆ ಜೋಡಿಸಿರುವ ವಿಷಯ ತಿಳಿದು ಕೆಂಡಾಮಂಡಲರಾದ ಸಚಿವ ಅಶೋಕ್, ಶೀಘ್ರವೇ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದರು. ಜೊತೆಗೆ ಕ್ಷೇತ್ರಾದ್ಯಂತ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಾನೇ ಖುದ್ದು ಪರಿಶೀಲನೆ ನಡೆಸುತ್ತೇನೆ. ಯಾವುದೇ ಸಮಸ್ಯಗಳಿದ್ದರೆ ತಕ್ಷಣವೇ ಪರಿಹಾರ ಮಾಡುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಕಂದಾಯ, ಬಿಡಬ್ಲ್ಯೂಎಸ್‌ಎಸ್‌ಬಿ, ಬೆಸ್ಕಾಂ, ಆರೋಗ್ಯ, ಮಹಾನಗರಪಾಲಿಕೆ ಮುಂತಾದ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು. ನಂತರ ಸಚಿವರು ವಿಶೇಷಚೇತನರ ಬದುಕಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ತ್ರಿಚಕ್ರ ವಾಹನ ವಿತರಿಸಿದರು.

ABOUT THE AUTHOR

...view details