ಬೆಂಗಳೂರು: ಪ್ರಸ್ತುತ ರಾಜ್ಯದ ಮುಂಗಾರು ಮತ್ತು ಪ್ರವಾಹದ ಸ್ಥಿತಿಗತಿಯ ಕುರಿತು ಕಂದಾಯ ಸಚಿವ ಆರ್.ಅಶೋಕ್, 19 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಸಂಗ್ರಹಿಸಿದ್ದಾರೆ.
ಮುಂಗಾರು ಆರಂಭ: ಪ್ರವಾಹ, ಭೂ ಕುಸಿತದ ಬಗ್ಗೆ ಡಿಸಿಗಳ ಜೊತೆ ಸಚಿವ ಅಶೋಕ್ ಚರ್ಚೆ - ಜಿಲ್ಲಾಧಿಕಾರಿಗಳ ಜೊತೆ ಸಚಿವ ಅಶೋಕ್ ಚರ್ಚೆ
ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ಭೂ ಕುಸಿತದ ಬಗ್ಗೆ ಮುಂದೆ ತೆಗೆದುಕೊಳ್ಳಬಹುದಾದ ಹಾಗೂ ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಕುರಿತಾಗಿ 19 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಚಿವ ಆರ್.ಅಶೋಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಡಿಸಿಗಳ ಜೊತೆ ಸಚಿವ ಅಶೋಕ್ ಚರ್ಚೆ
ವಿಧಾನಸೌಧದಲ್ಲಿ ಇಂದು ಡಿಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಿದ ಸಚಿವರು, ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಮತ್ತು ಭೂ ಕುಸಿತದ ಬಗ್ಗೆ ಮುಂದೆ ತೆಗೆದುಕೊಳ್ಳಬಹುದಾದ ಹಾಗೂ ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಕುರಿತಾಗಿ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.