ಬೆಂಗಳೂರು:ಹೊಸಕೋಟೆ ಮತ್ತು ಮಹದೇವಪುರ ಕ್ಷೇತ್ರದ ಹೂಡಿಯಲ್ಲಿರುವ ಆಹಾರ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಗೋದಾಮಿಗೆ ಭೇಟಿ ನೀಡಿದ ಸಚಿವ ಗೋಪಾಲಯ್ಯ, ಕಳಪೆ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡಿದ ಅಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡರು.
ಕಳಪೆ ಆಹಾರ ಪದಾರ್ಥ ಪೂರೈಕೆ: ಅಧಿಕಾರಿಗಳಿಗೆ ಸಚಿವ ಗೋಪಾಲಯ್ಯ ತರಾಟೆ - Bangalore News
ಜನರಿಗೆ ವಿತರಿಸುವ ಆಹಾರ ಧಾನ್ಯಗಳು ಕಳಪೆ ಗುಣಮಟ್ಟ ಹೊಂದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹೊಸಕೋಟೆ ಮತ್ತು ಮಹದೇವಪುರ ಕ್ಷೇತ್ರದ ಹೂಡಿಯಲ್ಲಿರುವ ಆಹಾರ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಗೋದಾಮಿಗೆ ಭೇಟಿ ನೀಡಿದ ಸಚಿವ ಗೋಪಾಲಯ್ಯ, ಅಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡರು.
ಕಳಪೆ ಆಹಾರ ಪದಾರ್ಥ ಪೂರೈಕೆ..ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಗೋಪಾಲಯ್ಯ
ಜನರಿಗೆ ವಿತರಿಸುವ ಆಹಾರ ಧಾನ್ಯಗಳು ಕಳಪೆ ಗುಣಮಟ್ಟ ಹೊಂದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭೇಟಿ ನೀಡಿದ ಸಚಿವರು, ಇದರ ಹಿಂದೆ ಯಾರೇ ಇದ್ದರೂ ಯಾವುದೇ ಒತ್ತಡಕ್ಕೆ ಮಣಿಯದೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಬೆಂಗಳೂರು ನಗರ ಜಿಲ್ಲಾ ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಗಿರಿಜಾ ದೇವಿ, ಬೆಂಗಳೂರು ಪೂರ್ವ ತಾಲೂಕು ಆಹಾರ ನಿರೀಕ್ಷಕ ರಾಜಪ್ಪ ಸೇರಿದಂತೆ ಇತರರು ಇದ್ದರು.