ಕರ್ನಾಟಕ

karnataka

ETV Bharat / city

ಆಕ್ಸಿಜನ್ ಪೂರೈಕೆ ಮಾಡಲು ತುರ್ತು ಕ್ರಮ, ಜೆಎಸ್​​ಡಬ್ಲ್ಯೂನಿಂದ 400 ಟನ್ ಆಮ್ಲಜನಕ ಪೂರೈಕೆ: ಸಚಿವ ನಿರಾಣಿ - ಸಚಿವ ಮುರುಗೇಶ್ ನಿರಾಣಿ

ತೀವ್ರ ನಿಗಾ ಘಟಕಗಳಲ್ಲಿ ದಾಖಲಾದ ರೋಗಿಗಳಿಗೆ ಆಮ್ಲಜನಕದ ಪೂರೈಕೆಯ ಕೊರತೆಯು ಗಂಭೀರ ಸ್ಥಿತಿಯಲ್ಲಿದೆ. ಪ್ರಸ್ತುತ ಜಿಂದಾಲ್​ನಿಂದ 400 ಟನ್ ಆಕ್ಸಿಜನ್ ಸಿಗುತ್ತಿದೆ.

Minister Murugesh Nirani
ಮುರುಗೇಶ್ ನಿರಾಣಿ

By

Published : Apr 21, 2021, 8:12 PM IST

ಬೆಂಗಳೂರು: ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು (ಆಕ್ಸಿಜನ್) ಪೂರೈಕೆ ಮಾಡಲು ಜೆಎಸ್‌ಡಬ್ಲ್ಯೂ ಸ್ಟೀಲ್ ಕಂಪನಿ ಒಪ್ಪಿಕೊಂಡಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದ್ದಾರೆ.

ಆಕ್ಸಿಜನ್ ಪೂರೈಕೆ ಬಗ್ಗೆ ಮುರುಗೇಶ್ ನಿರಾಣಿ ಹೇಳಿಕೆ

ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊವಿಡ್ -19 ಪ್ರಕರಣಗಳ ಸಂಖ್ಯೆಯು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪರಿಣಾಮವಾಗಿ ಅಪಾರ ಸಂಖ್ಯೆಯ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದಾಗಿ ತೀವ್ರ ನಿಗಾ ಘಟಕಗಳಲ್ಲಿ (ಐಸಿಯು) ದಾಖಲಾದ ರೋಗಿಗಳಿಗೆ ಆಮ್ಲಜನಕದ ಪೂರೈಕೆ ಕೊರತೆಯು ಗಂಭೀರ ಸ್ಥಿತಿಯಲ್ಲಿದೆ. ಪ್ರಸ್ತುತ ಜಿಂದಾಲ್​ನಿಂದ 400 ಟನ್ ಆಕ್ಸಿಜನ್ ಸಿಗುತ್ತಿದೆ. ಬೇರೆ ಸ್ಟೀಲ್ ಪ್ಲಾಂಟ್ ನವರಿಂದ 200 ಟನ್ ಸಿಗಲಿದೆ. ಒಟ್ಟು 600 ಟನ್ ಪ್ರತಿದಿನ ಆಕ್ಸಿಜನ್ ಸಿಗಲಿದೆ. ನಮ್ಮ ರಾಜ್ಯಕ್ಕೆ ಪ್ರತಿದಿನ 600 ಟನ್ ಆಕ್ಸಿಜನ್ ಸಾಕಾಗಲಿದೆ ಎಂದು ಹೇಳಿದರು.

ಬಲ್ಡೋಟಾ ಗಣಿ ಕಂಪನಿ ಬಂದ್ ಮಾಡಿದ್ದಾರೆ. ಈಗ ಅನಿವಾರ್ಯವಾಗಿ ನಮಗೆ ಆಕ್ಸಿಜನ್ ಬೇಕಾಗಿದೆ. ಹಾಗಾಗಿ ಅವರಿಗೆ ಮರು ಪ್ರಾರಂಭಿಸುವಂತೆ ಸೂಚಿಸಿದ್ದೇವೆ. ಪ್ರಸ್ತುತ ಸಿಗುತ್ತಿದ್ದ ಆಕ್ಸಿಜನ್ ಕೈಗಾರಿಕೆಗೆ ಸಾಕಾಗುತ್ತಿತ್ತು. ಬೇರೆ ಸ್ಟೀಲ್ ಕಂಪನಿಗಳ ಜೊತೆಯೂ ಸಭೆ ಮಾಡಿದ್ದೇವೆ. ದಿನದಿಂದ ದಿನಕ್ಕೆ ರೋಗಿಗಳು ಹೆಚ್ಚಾಗುತ್ತಿರುವುದರಿಂದ ಈಗಿರುವ ಪೂರೈಕೆ ಪ್ರಕಾರ ಕೇವಲ ಕೈಗಾರಿಕಾ ಉದ್ದೇಶಕ್ಕೆ ಬಳಕೆಯಾಗ್ತಿತ್ತು. ಪ್ರಥಮ ಆದ್ಯತೆಯಾಗಿ ಪರಿಗಣಿಸಿ ಆಸ್ಪತ್ರೆಗಳಿಗೆ ಪೂರೈಕೆ ಮಾಡುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.

ಕೊರೊನಾ ಸೋಂಕಿತರು ಹೆಚ್ಚಾದರೆ ಅದರ ಪ್ರಮಾಣವೂ ಹೆಚ್ಚಾಗಲಿದೆ. ಇದರ ಬಗ್ಗೆ ನನಗೆ ನಿಖರ ಮಾಹಿತಿಯಿಲ್ಲ. ಆರೋಗ್ಯ ಸಚಿವರ ಜೊತೆ ಚರ್ಚಿಸಬೇಕು ಎಂದರು.

ದೇಶ ಮತ್ತು ರಾಜ್ಯ ಕೊರೊನಾ ಸಂಕಷ್ಟದಲ್ಲಿ ಇದೆ. ಈ ಸಮಯದಲ್ಲಿ ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಗೈಡ್ ಲೈನ್ ಹೊರಡಿಸಿದ್ದಾರೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಆಗಬಾರದು. ಹಾಗಾಗಿ, ಜಿಂದಾಲ್ ಸೇರಿದಂತೆ ರಾಜ್ಯದ ಹಲವು ಕಂಪನಿಗಳ ಜೊತೆ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಆಗಬಾರದು ಎಂದು ಹೇಳಿದರು.

ವಿರೋಧ ಪಕ್ಷದವರು ಕೂಡ ಸರ್ಕಾರದ ಜೊತೆಗೆ ಕೈ ಜೋಡಿಸಬೇಕಾಗುತ್ತದೆ. ಎಲ್ಲ ಸ್ಟೀಲ್ ಕಂಪನಿಗಳೂ ಕೂಡ ಯುದ್ಧೋಪಾದಿಯಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದೇವೆ. ಕೊರೊನಾ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಾರ ಎಲ್ಲವನ್ನೂ ಜಾರಿಗೆ ತರುವಂತೆ ಹೇಳಿದ್ದಾರೆ ಎಂದು ತಿಳಿಸಿದರು.

ABOUT THE AUTHOR

...view details