ಕರ್ನಾಟಕ

karnataka

ETV Bharat / city

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಂತಾಗಿದೆ ಸುಮಲತಾ, ಹೆಚ್​ಡಿಕೆ ವಾಕ್ಸಮರ: ಆರ್.ಅಶೋಕ್

ಸುಮಲತಾ ಮತ್ತು ಹೆಚ್​ಡಿಕೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರೇ ಹಿಂದೆ ಸರಿದಿದ್ದಾರೆ. ಇದು ಅವರಿಬ್ಬರ ನಡುವಿನ ವೈಯುಕ್ತಿಕ‌ ಜಗಳ. ಹಾಗಾಗಿ, ನಾನು ಹೆಚ್ಚು ಹೇಳಲು ಬಯಸುವುದಿಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದರು.

By

Published : Jul 8, 2021, 9:04 PM IST

Updated : Jul 8, 2021, 10:38 PM IST

Minister R Ashok Reaction on sumalatha and hdk tug of war
ಇಸ್ರೇಲ್-ಪ್ಯಾಲೆಸ್ತೈನ್ ಯುದ್ಧದಂತಾಗಿದೆ ಸುಮಲತಾ, ಹೆಚ್​ಡಿಕೆ ವಾಕ್ಸಮರ : ಸಚಿವ ಆರ್. ಅಶೋಕ್

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವಿನ ವಾಕ್ಸಮರ ಮಂಡ್ಯದಲ್ಲಿ ನಿಲ್ಲದ ಯುದ್ಧವಾಗಿದೆ. ಒಂದು ರೀತಿಯ ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಂತಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಮಾಜಿ ಪ್ರಧಾನಿ ದೇವೇಗೌಡರೇ ಈ ವಿಚಾರದಿಂದ ಹಿಂದೆ ಸರಿದಿದ್ದಾರೆ. ಇದು ಅವರಿಬ್ಬರ ನಡುವಿನ ವೈಯುಕ್ತಿಕ‌ ಜಗಳ. ಹಾಗಾಗಿ, ನಾನು ಹೆಚ್ಚು ಹೇಳಲು ಬಯಸುವುದಿಲ್ಲ ಎಂದರು.

ಸಚಿವ ಆರ್.ಅಶೋಕ್

'ತನಿಖೆಗೆ ಸರ್ಕಾರ ಸಿದ್ದ'

ಕೆಆರ್​ಎಸ್ ಡ್ಯಾಮ್​​ ಆಸುಪಾಸು ಕಂದಾಯ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ಕುರಿತು ದೂರು ಸಲ್ಲಿಸಿದರೆ ತನಿಖೆ ನಡೆಸಿ ಕ್ರಮಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಸಚಿವರು ಹೇಳಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ದಾಖಲೆಗಳಿದ್ದರೆ ದೂರು ಸಲ್ಲಿಸುವುದಕ್ಕೆ ಅಭ್ಯಂತರವಿಲ್ಲ. ಕಂದಾಯ ಇಲಾಖೆ ಕಚೇರಿ ತೆರೆದಿರುತ್ತದೆ, ಕಚೇರಿಗೆ ಬಂದು ದಾಖಲೆಗಳಸಹಿತ ಅವರು ದೂರು ಸಲ್ಲಿಸಬಹುದು ಎಂದರು.

ಇದನ್ನೂ ಓದಿ:ಚುನಾವಣೆಯಲ್ಲಿ ಸೋತ ಅಣ್ಣಾಮಲೈಗೆ ಮಹತ್ವದ ಹುದ್ದೆ ನೀಡಿದ ಬಿಜೆಪಿ ಹೈಕಮಾಂಡ್​

ಕೆಆರ್​ಎಸ್ ಡ್ಯಾಮ್​ ಸುತ್ತಮುತ್ತಲೂ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದ್ದು, ಕಂದಾಯ ಇಲಾಖೆಗೆ ಸೇರಿದ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಅಶೋಕ್ ಸ್ಪಷ್ಟಪಡಿಸಿದ್ದಾರೆ.

'ಡ್ಯಾಂ ಬಿರುಕು ಬಿಟ್ಟಿಲ್ಲ'

ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂಬುದು ಸುಳ್ಳು. ಈ ವಿಷಯದಲ್ಲಿ ಯಾರೊಬ್ಬರೂ ವದಂತಿ ಹಬ್ಬಿಸಬಾರದು. ಸುಳ್ಳು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಆರ್​.ಅಶೋಕ್ ಎಚ್ಚರಿಕೆ ನೀಡಿದರು. ಅಣೆಕಟ್ಟೆ ಬಿರುಕು ಬಿಟ್ಟಿಲ್ಲವೆಂದು ಈಗಾಗಲೇ ತಜ್ಞರು ಹಾಗೂ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದು, ಪದೇ ಪದೆ ಈ ವಿಚಾರ ಕೆದಕುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Last Updated : Jul 8, 2021, 10:38 PM IST

ABOUT THE AUTHOR

...view details