ಬೆಂಗಳೂರು: ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರನ್ನು ಸರ್ಕಾರದ ಮುಖ್ಯ ಸಚೇತಕರಾಗಿ ನೇಮಿಸಿ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಆದೇಶಿಸಿದ್ದಾರೆ. ಈ ಮುನ್ನ ಮಹಾಂತೇಶ ಕವಟಗಿಮಠ ಪರಿಷತ್ನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿದ್ದರು. ಆದರೆ ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ದ್ವಿಸದಸ್ಯ ಬಲದ ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕವಟಗಿಮಠ ಸೋಲು ಕಂಡಿದ್ದರು. ಹೀಗಾಗಿ ಸರ್ಕಾರಿ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.
ಸರ್ಕಾರದ ಮುಖ್ಯ ಸಚೇತಕರಾಗಿ ಪರಿಷತ್ ಸದಸ್ಯ ನಾರಾಯಣಸ್ವಾಮಿ ನೇಮಕ - ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾಗಿ ನಾರಾಯಣಸ್ವಾಮಿ ನೇಮಕ
ಮಾರ್ಚ್ 2022ರಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರನ್ನು ಸರ್ಕಾರದ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
![ಸರ್ಕಾರದ ಮುಖ್ಯ ಸಚೇತಕರಾಗಿ ಪರಿಷತ್ ಸದಸ್ಯ ನಾರಾಯಣಸ್ವಾಮಿ ನೇಮಕ ನಾರಾಯಣಸ್ವಾಮಿ ನೇಮಕ](https://etvbharatimages.akamaized.net/etvbharat/prod-images/768-512-15537809-421-15537809-1654997848027.jpg)
ನಾರಾಯಣಸ್ವಾಮಿ ನೇಮಕ