ಕರ್ನಾಟಕ

karnataka

ETV Bharat / city

ಸ್ಕೂಟರ್ ಬೀಳಿಸಿದ್ದಕ್ಕೆ ಸೆಕ್ಯೂರಿಟಿ ಥಳಿಸಿ ಹತ್ಯೆ: ಆರೋಪಿ ಬಂಧನ - ಬೆಂಗಳೂರು ಡೆಲಿವರಿ ಬಾಯ್ ಬಂಧನ

ಕ್ಷುಲ್ಲಕ ಕಾರಣಕ್ಕೆ ಸೆಕ್ಯೂರಿಟಿಗೆ ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿದ ಡೆಲಿವರಿ ಬಾಯ್​ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಆರೋಪಿ
ಆರೋಪಿ

By

Published : Jun 23, 2022, 9:53 AM IST

ಬೆಂಗಳೂರು: ಸ್ಕೂಟರ್ ಬೀಳಿಸಿದ್ದಕ್ಕೆ ಸೆಕ್ಯೂರಿಟಿಗೆ ಹಿಗ್ಗಾಮುಗ್ಗಾ ಥಳಿಸಿ ಆತನ ಸಾವಿಗೆ ಕಾರಣನಾದ ಡೆಲಿವರಿ ಬಾಯ್​ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ‌. ಕಾರ್ತಿಕ್ (25) ಬಂಧಿತ ಆರೋಪಿ, ಕುಮಾರ್ ನಾಯ್ಕ್ (45) ಮೃತ ದುರ್ದೈವಿ.

ಜೂ.12 ರಂದು ಕೊಡಿಗೆಹಳ್ಳಿ ಗೇಟ್ ಸಮೀಪದ ಗೋದ್ರೇಜ್ ಅಪಾರ್ಟ್‌ಮೆಂಟ್‌ಗೆ ಬಂದಿದ್ದ ಡೆಲಿವರಿ ಬಾಯ್ ಕಾರ್ತಿಕ್, ಅಡ್ಡಾದಿಡ್ಡಿ ಸ್ಕೂಟರ್ ಪಾರ್ಕ್ ಮಾಡಿದ್ದ. ಸ್ಥಳದಲ್ಲಿದ್ದ ಸೆಕ್ಯೂರಿಟಿ ಕುಮಾರ್ ನಾಯ್ಕ್ ತಾವೇ ಸ್ಕೂಟರ್​ ಅನ್ನು ಸರಿಯಾಗಿ ಪಾರ್ಕ್ ಮಾಡಲು ತೆಗೆದಿದ್ದಾರೆ. ಈ ವೇಳೆ, ನಿಯಂತ್ರಣ ತಪ್ಪಿ ಆರೋಪಿಯ ಸ್ಕೂಟರ್ ಬಿದ್ದಿದೆ. ಅಷ್ಟಕ್ಕೆ ರೊಚ್ಚಿಗೆದ್ದ ಕಾರ್ತಿಕ್, ಸೆಕ್ಯೂರಿಟಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಆರೋಪಿ ಬಂಧನದ ಕುರಿತು ಮಾಹಿತಿ ನೀಡಿದ ಈಶಾನ್ಯ ವಿಭಾಗದ ಡಿಸಿಪಿ ಡಾ.ಅನೂಪ್ ಎ ಶೆಟ್ಟಿ

ತೀವ್ರವಾಗಿ ಗಾಯಗೊಂಡಿದ್ದ ಕುಮಾರ್ ನಾಯ್ಕ್ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ 9 ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಘಟನಾ ದಿನ ಆರೋಪಿಯನ್ನ ವಶಕ್ಕೆ ಪಡೆದಿದ್ದ ಅಮೃತಹಳ್ಳಿ ಪೊಲೀಸರು, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ.ಅನೂಪ್ ಎ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ ತ್ರಿವಳಿ ಕೊಲೆ ಪ್ರಕರಣ: ಪ್ರವೀಣ್ ಭಟ್ ನಿರ್ದೋಷಿ.. ಹೈಕೋರ್ಟ್ ‌ಆದೇಶ

ABOUT THE AUTHOR

...view details