ಆನೇಕಲ್(ಬೆಂಗಳೂರು):ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಉಪ ವಿಭಾಗದ ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಕೊಲೆ ನಡೆದಿದೆ. ತಮಿಳುನಾಡು ಮೂಲದ ಮಾದಮ್ಮ(45) ಕೊಲೆಯಾದವರು. ಮಣಿ ಎಂಬ ಪುರುಷನೊಂದಿಗೆ ಈಕೆ ವಾಸವಿದ್ದರು. ಇಂದು ಮಧ್ಯಾಹ್ನ ಕಂಠಪೂರ್ತಿ ಕುಡಿದು ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕಕ್ಕೇರಿ ಕೊಲೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಆನೇಕಲ್: ಕುಡಿದ ಮತ್ತಿನಲ್ಲಿ ಮಹಿಳೆಯ ಕೊಲೆಗೈದ ವ್ಯಕ್ತಿ - ಈಟಿವಿ ಭಾರತ್ ಕನ್ನಡ
ಆನೇಕಲ್ ಉಪ ವಿಭಾಗದ ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಮಿಳುನಾಡು ಮೂಲದ ಮಹಿಳೆ ಕೊಲೆಯಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಕುಡಿತದ ಮತ್ತಿನಲ್ಲಿ ಮಹಿಳೆಯ ಬೀಕರ ಕೊಲೆ