ಕರ್ನಾಟಕ

karnataka

By

Published : Jul 24, 2021, 9:59 PM IST

ETV Bharat / city

ಮಳೆಯಾರ್ಭಟಕ್ಕೆ ಕರುನಾಡಲ್ಲಿ ಈವರೆಗೆ 9 ಮಂದಿ ಬಲಿ, 283 ಗ್ರಾಮಗಳು ನೆರೆಪೀಡಿತ

ರಾಜ್ಯದಲ್ಲಿ ಸುರಿದ ಧಾರಾಕಾರ ಮಳೆಗೆ ಈವರೆಗೆ 9 ಮಂದಿ ಸಾವನ್ನಪ್ಪಿದ್ದು, 283 ಗ್ರಾಮಗಳು ನೆರೆ ಪೀಡಿತವಾಗಿವೆ ಎಂದು ಕಂದಾಯ ಇಲಾಖೆ ತಿಳಿಸಿದೆ.

Nine deaths in the state due to heavy rain
ರಾಜ್ಯದಲ್ಲಿ ಈವರೆಗೆ 9 ಮಂದಿ ಸಾವು, 283 ಗ್ರಾಮಗಳು ನೆರೆ ಪೀಡಿತ

ಬೆಂಗಳೂರು: ಮಳೆಯಿಂದ ರಾಜ್ಯದಲ್ಲಿ ಇದುವರೆಗೆ 9 ಜನರು ಸಾವನ್ನಪ್ಪಿದ್ದು, 11 ಜಿಲ್ಲೆಗಳ 45 ತಾಲೂಕುಗಳಲ್ಲಿ ಸಂಕಷ್ಟ ಎದುರಾಗಿದೆ. ಸುಮಾರು 283 ಗ್ರಾಮಗಳಿಗೆ ಮಳೆಯಿಂದ ಭಾರೀ ಹಾನಿ ಸಂಭವಿಸಿವೆ. 36,498 ಜನರು ಪ್ರವಾಹದಿಂದಾಗಿ ಸಮಸ್ಯೆಗೀಡಾಗಿದ್ದು, ಇದುವರೆಗೆ 3 ಜನರು ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮಳೆಗೆ 134 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2,480 ಮನೆಗಳು ಭಾಗಶ: ಹಾನಿಗೀಡಾಗಿವೆ. 78 ಜಾನುವಾರುಗಳು ಸಾವನ್ನಪ್ಪಿವೆ. ಇದುವರೆಗೆ 31,360 ಜನರನ್ನು ಸ್ಥಳಾಂತರಿಸಲಾಗಿದೆ. 237 ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 22,417 ಜನರಿಗೆ ಪರಿಹಾರದ ವ್ಯವಸ್ಥೆ ಮಾಡಲಾಗಿದೆ.

ಇನ್ನು, ಪ್ರವಾಹದಿಂದಾಗಿ ರಾಜ್ಯದಲ್ಲಿ 58,960 ಎಕರೆಯಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. 1,962 ಎಕರೆಯಲ್ಲಿ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ಕೂಡ ನಾಶವಾಗಿವೆ. ಸುಮಾರು 555 ಕಿ.ಮೀ ರಸ್ತೆ ಹಾನಿಯಾಗಿದ್ದು, ರಾಜ್ಯದ ವಿವಿಧೆಡೆ 123 ಸೇತುವೆಗಳು ಕೊಚ್ಚಿ ಹೋಗಿವೆ.

ಪ್ರವಾಹದಿಂದಾಗಿ 213 ಶಾಲೆಗಳಿಗೆ ಭಾರಿ ಹಾನಿಯಾಗಿದ್ದು, 33 ಆರೋಗ್ಯ ಕೇಂದ್ರಗಳಿಗೂ ತೊಂದರೆಯಾಗಿದೆ. ಮಳೆಯಿಂದಾಗಿ 3,502 ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, 341 ವಿದ್ಯುತ್ ಟ್ರಾನ್ಸ್​ಫಾರ್ಮರ್​ಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ:ಪ್ರವಾಹದಿಂದ ಕೊಚ್ಚಿ ಹೋದ 20ಕ್ಕೂ ಅಧಿಕ ಮನೆಗಳು: ತುತ್ತು ಅನ್ನಕ್ಕಾಗಿ ಪರದಾಟ

ABOUT THE AUTHOR

...view details