ಬೆಂಗಳೂರು : ಕೊರೊನಾ ನಿರ್ವಹಣೆ ಕಾರ್ಯಗಳಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್. ಆರ್. ರಮೇಶ್ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 'ಲೆಕ್ಕ ಕೊಡಿ' ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ನಾವು ಲೆಕ್ಕ ಕೊಡಲು ಸಿದ್ಧರಾಗಿಯೇ ಇದ್ದೇವೆ. ಆದರೆ, ಅವರ ಅವಧಿಯಲ್ಲಿ ನಡೆದಿರುವ 97 ಬೃಹತ್ ಹಗರಣಗಳ ಬಗ್ಗೆಯೂ ಅವರು ಲೆಕ್ಕ ಕೊಡಬೇಕಲ್ಲವೇ?. ಹಾಗಾಗಿಯೇ, ಸಿದ್ಧರಾಮಯ್ಯ ಅವರನ್ನು ಮಾಧ್ಯಮಗಳ ಸಮ್ಮುಖದಲ್ಲಿ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದೇವೆ ಎಂದು ಬಹಿರಂಗ ಸವಾಲು ಹಾಕಿದ್ದಾರೆ.