ಕರ್ನಾಟಕ

karnataka

By

Published : Aug 31, 2020, 9:01 PM IST

ETV Bharat / city

ಪ್ರಣಬ್ ಮುಖರ್ಜಿ ವಿಧಿವಶ: ರಾಜ್ಯದಲ್ಲೂ ಏಳು ದಿನ ಶೋಕಾಚರಣೆ

ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್​​ ಮುಖರ್ಜಿಯವರು ನಿಧನರಾದ ಹಿನ್ನೆಲೆ ರಾಜ್ಯಾದ್ಯಂತ ಆ. 31(ಇಂದಿನಿಂದ) ಸೆ.6ರ ವರೆಗೆ ಏಳು ದಿನಗಳ ಕಾಲ ಶೋಕಾಚರಣೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ.

pranab-mukherjee-death-mourning-seven-days-in-state
ವಿಧಾನಸೌಧ

ಬೆಂಗಳೂರು: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನದ ಹಿನ್ನೆಲೆ ಏಳು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಇರಲಿದೆ.

ಆದೇಶ ಪತ್ರ

ಮಾಜಿ ರಾಷ್ಟ್ರಪತಿಗಳ ಗೌರವಾರ್ಥವಾಗಿ ಆ.31ರಿಂದ ಸೆ.6ರ ವರೆಗೆ ಏಳು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು. ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಏಳು ದಿನಗಳ ಕಾಲ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ.

ABOUT THE AUTHOR

...view details