ಕರ್ನಾಟಕ

karnataka

ETV Bharat / city

ಕೋವಿಡ್​ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೂ ಪರಿಹಾರ ನೀಡಿ: ಶಾಸಕ ರಾಜೇಗೌಡ

ಕೋವಿಡ್ ಸಮಯದಲ್ಲಿ ಎಷ್ಟು ಪತ್ರಕರ್ತರು ಮೃತಪಟ್ಟಿದ್ದಾರೆ ಎಂಬ ಅಂಕಿಅಂಶವನ್ನು ಸರ್ಕಾರ ಕೊಡಬೇಕು. ಅವರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿ, ಮೃತರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂದು ವಿಧಾನಸಭೆಯಲ್ಲಿ ಶೃಂಗೇರಿ ಶಾಸಕ ರಾಜೇಗೌಡ ಒತ್ತಾಯಿಸಿದರು.

By

Published : Mar 9, 2021, 7:46 PM IST

MLA Rajegowda
ಶೃಂಗೇರಿ ಶಾಸಕ ರಾಜೇಗೌಡ

ಬೆಂಗಳೂರು: ಕೋವಿಡ್ ಸಮಯದಲ್ಲಿ ಮಾಧ್ಯಮದವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಕೋವಿಡ್​ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಸ್ಥರಿಗೂ ಪರಿಹಾರ ನೀಡಬೇಕು ಎಂದು ಶೃಂಗೇರಿ ಶಾಸಕ ರಾಜೇಗೌಡ ಆಗ್ರಹಿಸಿದ್ದಾರೆ.

ಕೋವಿಡ್​ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೂ ಪರಿಹಾರ ನೀಡಿ: ಶಾಸಕ ರಾಜೇಗೌಡ

ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕೋವಿಡ್ ಸಮಯದಲ್ಲಿ ಎಷ್ಟು ಪತ್ರಕರ್ತರು ಮೃತಪಟ್ಟಿದ್ದಾರೆ ಎಂಬ ಅಂಕಿಅಂಶ ಕೊಡಬೇಕು. ಅವರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿ, ಮೃತರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಬೇಕು. ಜೊತೆಗೆ ಪತ್ರಕರ್ತರಿಗೆ ಉಚಿತ ಕೋವಿಡ್ ವ್ಯಾಕ್ಸಿನ್ ನೀಡಬೇಕು ಎಂದರು.

ಇದನ್ನೂ ಓದಿ:ತಮಿಳುನಾಡಿನ ನದಿ ಜೋಡಣೆ: ಪರಿಷತ್​ನಲ್ಲಿ ಕಾವೇರಿದ ಕಾವೇರಿ‌ ಚರ್ಚೆ

ಸರ್ಕಾರದ ಪರವಾಗಿ ಉತ್ತರಿಸಿದ ಸಚಿವ ಬೊಮ್ಮಯಿ, ಆರೋಗ್ಯ ಸೇತು ಆ್ಯಪ್​ನಲ್ಲಿ ನೋಂದಣಿ ಆದವರಿಗೆ ಉಚಿತ ವ್ಯಾಕ್ಸಿನ್ ಕೊಡಲಾಗುತ್ತಿದೆ ಎಂದು ತಿಳಿಸಿದರು.

ABOUT THE AUTHOR

...view details