ಬೆಂಗಳೂರು: ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಚಿನ್ನದ ಸರ ಹಾಗೂ ಸಾವಿರಾರು ರೂ. ಹಣವನ್ನು ಪುನಃ ಅವರಿಗೆ ಹಿಂದಿರುಗಿಸಿ ರೈಲ್ವೆ ಟಿಕೆಟ್ ಕಲೆಕ್ಟರ್ವೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ.
ರೈಲ್ವೆ ಟಿಕೆಟ್ ಕಲೆಕ್ಟರ್ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ..
ಹಣ ಕಂಡರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಸಮಾಜದಲ್ಲಿ ನಾವಿದ್ದೇವೆ. ಆದರೆ, ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಚಿನ್ನದ ಸರ ಹಾಗೂ ಸಾವಿರಾರು ರೂ. ಹಣವನ್ನು ಪುನಃ ಅವರಿಗೆ ಹಿಂದಿರುಗಿಸಿ ರೈಲ್ವೆ ಟಿಕೆಟ್ ಕಲೆಕ್ಟರ್ವೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ.
![ರೈಲ್ವೆ ಟಿಕೆಟ್ ಕಲೆಕ್ಟರ್ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ.. Railway Ticket Collector honesty appreciated by the public](https://etvbharatimages.akamaized.net/etvbharat/prod-images/768-512-5779355-thumbnail-3x2-lek.jpg)
ಟಿಕೆಟ್ ಕೌಂಟರ್ ಚೀಫ್ ನಾಗರಾಜ್ ಪ್ರಾಮಾಣಿಕತೆ ಮೆರೆದ ಅಧಿಕಾರಿ. ಮೈಲಾಡುತುರೈ-ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ಹೇಮಲತಾ ಎಂಬುವರು ಪ್ರಯಾಣಿಸುತ್ತಿದ್ದರು. ರೈಲು ಇಳಿಯುವ ಅವಸರದಲ್ಲಿ ಚಿನ್ನದ ಸರ ಹಾಗೂ 13,400 ರೂ. ನಗದು ಇರುವ ಪರ್ಸ್ನ ರೈಲಿನಲ್ಲಿಯೇ ಮರೆತು ಹೋಗಿದ್ದಾರೆ.
ಈ ವೇಳೆ ಕಾರ್ಯನಿರ್ವಹಿಸುತ್ತಿದ್ದ ಟಿಕೆಟ್ ಕಲೆಕ್ಟರ್ ನಾಗರಾಜ್, ಮಹಿಳೆ ಉಳಿದುಕೊಂಡಿದ್ದ ಸೀಟಿನ ಬಳಿ ಬಂದಾಗ ಪರ್ಸ್ ಇರುವುದು ಗೊತ್ತಾಗಿದೆ. ತಕ್ಷಣ ಪ್ಯಾಸೆಂಜರ್ ಲಿಸ್ಟ್ನಲ್ಲಿ ಹೇಮಲತಾ ಅವರು ಮಾಹಿತಿ ತಿಳಿದುಕೊಂಡು ಅವರಿಗೆ ಕಳೆದುಹೋಗಿದ್ದ ಸರ ಹಾಗೂ ಹಣ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.