ಬೆಂಗಳೂರು : ಆತ್ಮಚರಿತ್ರೆಗಳು ನಮಗೆ ಮಾಹಿತಿ ಜೊತೆಗೆ ದಾರಿದೀಪವಾಗಬೇಕು. ಸತ್ಯವನ್ನು ಮರೆ ಮಾಚುವ ಪುಸ್ತಕವಾಗಬಾರದು ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟ್ವೀಟ್ ಮಾಡಿದ್ದಾರೆ.
ಆತ್ಮಚರಿತ್ರೆ ಸತ್ಯವನ್ನು ಮರೆ ಮಾಚುವ ಪುಸ್ತಕವಾಗಬಾರದು: ರಮೇಶ್ ಬಾಬು ಟ್ಟೀಟ್ - ಎಸ್ ಎಂ ಕೃಷ್ಣ ಹೇಳಿಕೆಗೆ ರಮೇಶ್ ಬಾಬು ಟ್ವಿಟ್
2004ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸೋಲು ಕಂಡಾಗ ಜೆಡಿಎಸ್ ಬೆಂಬಲದೊಂದಿಗೆ ಮುಖ್ಯಮಂತ್ರಿ ಆಗಲು ಎಸ್.ಎಂ. ಕೃಷ್ಣರವರು ದೇವೇಗೌಡರ ಮನೆ ಮುಂದೆ ನಿಂತಿದ್ದರು. ಈ ಸತ್ಯ ಆತ್ಮಚರಿತ್ರೆ ಪುಸ್ತಕದಲ್ಲಿ ದಾಖಲಾಗಲಿ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತಾದ ಮಾಹಿತಿ ಸದ್ಯ ಸುದ್ದಿಯಾಗಿದೆ. 2004ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಸೋಲು ಕಂಡಾಗ ಜೆಡಿಎಸ್ ಬೆಂಬಲದೊಂದಿಗೆ ಮುಖ್ಯಮಂತ್ರಿ ಆಗಲು ಎಸ್.ಎಂ. ಕೃಷ್ಣರವರು ದೇವೇಗೌಡರ ಮನೆ ಮುಂದೆ ನಿಂತಿದ್ದರು. ಈ ಸತ್ಯ ಆತ್ಮಚರಿತ್ರೆ ಪುಸ್ತಕದಲ್ಲಿ ದಾಖಲಾಗಲಿ ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ಎಸ್.ಎಂ. ಕೃಷ್ಣ ತಮ್ಮ ಆತ್ಮಚರಿತ್ರೆ ಪುಸ್ತಕದಲ್ಲಿ ದೇವೇಗೌಡರು ಕಾಂಗ್ರೆಸ್ ಸೇರಲು ಬಯಸಿದ್ದರು ಎಂದು ಹೇಳಿರುವುದನ್ನು ಶೈಕ್ಷಣಿಕ ಹಿನ್ನೆಲೆಯಲ್ಲಿ ನೋಡಬೇಕಿದೆ. ಈ ದೇಶದ ಸ್ವಾತಂತ್ರ್ಯ ಚಳುವಳಿ ರೂಪಿಸಿದ ಕಾಂಗ್ರೆಸ್ ಬಹುತೇಕ ಪಕ್ಷಗಳಿಗೆ ಮೂಲ ಪಕ್ಷವಾಗಿದೆ. ಎಸ್. ಎಂ. ಕೃಷ್ಣ ಅವರು ಪಿಎಸ್ಪಿ ಪಕ್ಷದವರಾಗಿದ್ದು ಮೂಲ ಕಾಂಗ್ರೆಸ್ಸಿಗರು ಅಲ್ಲ ಎಂದು ಹೇಳಿದ್ದಾರೆ.