ಬೆಂಗಳೂರು:ಸರ್ಕಾರಿ ಕಾರ್ಯಕ್ರಮಕ್ಕೆ ಮಾಧ್ಯಮದವರಿಗೆ ನಿರ್ಬಂಧ ಹೇರಿದ ಹಿನ್ನೆಲೆ ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ ಪತ್ರಕರ್ತರು ಮೌನ ಪ್ರತಿಭಟನೆ ನಡೆಸಿದರು.
ವಿಧಾನಸಭೆ, ಸಿಎಂ ಮನೆ ನಂತರ ಸರ್ಕಾರಿ ಕಾರ್ಯಕ್ರಮಕ್ಕೂ ನಿರ್ಬಂಧ: ಪತ್ರಕರ್ತರಿಂದ ಮೌನ ಪ್ರತಿಭಟನೆ
ಶಾಸಕರ ಭವನದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಪ್ರತಿಮೆ ಮಾಲಾರ್ಪಣೆ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು. ಸಿಎಂ ಭಾಗವಹಿಸುವ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡದೆ ಪೊಲೀಸರು ನಿರ್ಬಂಧ ಹೇರಿದರು. ಈ ನಿಟ್ಟಿನಲ್ಲಿ ಪತ್ರಕರ್ತರು ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ ಮೌನ ಪ್ರತಿಭಟನೆ ನಡೆಸಿದರು.
ಪತ್ರಕರ್ತರಿಂದ ವಿಧಾನಸೌಧದ ಮುಂದೆ ಮೌನ ಪ್ರತಿಭಟನೆ
ಇಂದುವಾಲ್ಮೀಕಿಜಯಂತಿ ಹಿನ್ನೆಲೆ ಶಾಸಕರ ಭವನದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಪ್ರತಿಮೆ ಮಾಲಾರ್ಪಣೆ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು. ಸಿಎಂ ಭಾಗವಹಿಸುವ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡದೆ ಪೊಲೀಸರು ನಿರ್ಬಂಧ ಹೇರಿದರು. ಈ ನಿಟ್ಟಿನಲ್ಲಿ ಪತ್ರಕರ್ತರು ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ ಮೌನ ಪ್ರತಿಭಟನೆ ನಡೆಸಿದರು.
ಸಿಎಂ ಮನೆ, ವಿಧಾನಸಭೆ ಆಯಿತು. ಇದೀಗ ಸಿಎಂ ಭಾಗವಹಿಸುವ ಕಾರ್ಯಕ್ರಮಗಳಿಗೂ ಕಡಿವಾಣ ಹಾಕಲಾಗಿದೆ. ಹೀಗಾಗಿ ಸಿಎಂ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸಿದರು.
Last Updated : Oct 13, 2019, 1:41 PM IST