ಕರ್ನಾಟಕ

karnataka

ETV Bharat / city

ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ: ದೇವನಹಳ್ಳಿ ಬಳಿ ಇಬ್ಬರು ಯುವಕರ ಸಾವು - ದೇವನಹಳ್ಳಿ

ತಡರಾತ್ರಿ ಮೂವರು ಯುವಕರು ಒಂದೇ ಬೈಕ್​ನಲ್ಲಿ ಆವತಿ ಕಡೆಯಿಂದ ದೇವನಹಳ್ಳಿಗೆ ಬರುತ್ತಿದ್ದಾಗ ಸಾಯಿಬಾಬಾ ದೇವಸ್ಥಾನದ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವನಹಳ್ಳಿಯಲ್ಲಿ ತಡರಾತ್ರಿ ಭೀಕರ ಅಪಘಾತ

By

Published : Oct 1, 2019, 9:04 AM IST

ದೇವನಹಳ್ಳಿ:ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸಾಯಿ ಬಾಬಾ ದೇಗುಲದ ಬಳಿ ನಡೆದಿದೆ.

ದೇವನಹಳ್ಳಿ ತಾಲೂಕಿನ ತಿಮ್ಮಳ್ಳಿ ನಿವಾಸಿಗಳಾದ‌ ಚರಣ್ (24), ಮೋಹನ್ (23) ಮೃತರು. ಬೈಕ್​ನಲ್ಲಿದ್ದ ಮತ್ತೋರ್ವ ಯುವಕ ರಿಷಬ್ (23) ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ ಮೂವರು ಯುವಕರು ಒಂದೇ ಬೈಕ್​ನಲ್ಲಿ ಆವತಿ ಕಡೆಯಿಂದ ದೇವನಹಳ್ಳಿಗೆ ಬರುತ್ತಿದ್ದಾಗ ಸಾಯಿಬಾಬಾ ದೇವಸ್ಥಾನದ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಇನ್ನು ಸ್ಥಳಕ್ಕೆ ಭೇಟಿ ನೀಡಿದ ದೇವನಹಳ್ಳಿಯ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details