ಬೆಂಗಳೂರು:ಗೂಂಡಾ ಕಾಯ್ದೆಯಡಿ ಜ್ಞಾನಭಾರತಿ ಪೊಲೀಸ್ ಠಾಣೆಯ ರೌಡಿಶೀಟರ್ ಕಾರ್ತಿಕ್ ಉಳ್ಳಾಲ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೋಪಿಯು ತನ್ನ ಸಹಚರರ ಜೊತೆ ಸೇರಿ ಪಶ್ಚಿಮ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಇಂಜಿನಿಯರ್ ಕಾಲೇಜು ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ. ಇದನ್ನು ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ ಮಾಡುತ್ತಿದ್ದ.
ಇದನ್ನೂ ಓದಿ:ಭಕ್ತನ ಪಂಚೆಯಲ್ಲಿ ಅಡಗಿತ್ತು ಪುರಾತನ ಪಂಚಲೋಹ ವಿಗ್ರಹ !
ಈತನ ವಿರುದ್ಧ ಐದು ಕೊಲೆ ಪ್ರಕರಣ, 3 ಕೊಲೆ ಯತ್ನ, ಡ್ರಗ್ಸ್ ಸಾಗಣೆ, ಹಲ್ಲೆ ಸೇರಿದಂತೆ ಒಟ್ಟು 21 ಪ್ರಕರಣಗಳು ಈತನ ಮೇಲೆ ದಾಖಲಾಗಿವೆ. ರಾಮನಗರ ಜಿಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರಂತರವಾಗಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಸಿ ಸಾರ್ವಜನಿಕರಿಗೆ ಅಶಾಂತಿಯವನ್ನುಂಟು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.