ಕರ್ನಾಟಕ

karnataka

ETV Bharat / city

ಬೆಂಗಳೂರಲ್ಲಿ ಹರಿದ ನೆತ್ತರು: ಜೈಲಿನಿಂದ ಬಿಡುಗಡೆಯಾದವನನ್ನು ಕೊಚ್ಚಿ ಕೊಂದ ರೌಡಿಗಳು! - Bengaluru rowdy sheeter news

ಬೆಂಗಳೂರಲ್ಲಿ ಮತ್ತೆ ರೌಡಿ ಶೀಟರ್​ಗಳು ಬಾಲ ಬಿಚ್ಚಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿದ್ದ ರೌಡಿ ಶೀಟರ್​ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

murder
ರೌಡಿ ಹತ್ಯೆ

By

Published : Jun 7, 2020, 12:15 PM IST

Updated : Jun 7, 2020, 1:17 PM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಪರಾಧ ಚಟುವಟಿಕೆಗಳು ಮತ್ತೆ ಹೆಚ್ಚಾಗಿವೆ. ಜೈಲಿನಿಂದ ಬಿಡುಗಡೆಯಾದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ಹೆಚ್ಎಎಲ್ ಪೊಲೀಸ್ ಠಾಣೆಯ LBS ನಗರದಲ್ಲಿ ನಡೆದಿದೆ.

ಅರವಿಂದ್(27) ಕೊಲೆಯಾದ ವ್ಯಕ್ತಿ. ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದ ಈತ LBS ನಗರದ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಸವಿದ್ದ. ನಿನ್ನೆ ತಡ ರಾತ್ರಿ ದುಷ್ಕರ್ಮಿಗಳು ಬಾಡಿಗೆ ಮನೆಗೆ ಏಕಾಏಕಿ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಅರವಿಂದ್​ನನ್ನು ಕೊಲೆ ಮಾಡಿ ಪರಾರಿ ಆಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಹೆಚ್​ಎಎಲ್ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ಇದ್ದು, ಅರಂವಿದ್​ ಸಂಪರ್ಕದಲ್ಲಿರುವ ಕೆಲವರನ್ನ ವಿಚಾರಣೆ ನಡೆಸಿದ್ದಾರೆ.

ಅರವಿಂದ್ ಹಳೆ ರೌಡಿ ಶೀಟರ್ ಆಗಿದ್ದು, ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಈತನ ವಿರುದ್ಧ ಹಲವು ಪ್ರಕರಣಗಳಿವೆ. ಕಳೆದ ಕೆಲ‌ ದಿನಗಳ ಹಿಂದಷ್ಟೇ ಈತ ಜೈಲಿನಿಂದ ಬಿಡುಗಡೆಯಾಗಿದ್ದ.

Last Updated : Jun 7, 2020, 1:17 PM IST

ABOUT THE AUTHOR

...view details