ಬೆಂಗಳೂರು: ಎರಡು ಇಸ್ಪೀಟ್ ಗ್ಯಾಂಗ್ಗಳ ನಡುವೆ ನಡೆದಿದ್ದ ಗಲಾಟೆ ಪ್ರಕರಣವೊಂದರ ಬೆನ್ನತ್ತಿದ್ದ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಶಾಮೀಲಾಗಿದ್ದ ರೌಡಿಶೀಟರ್ ಮತ್ತು ಸಹಚರರನ್ನು ಬಂಧಿಸಿದ್ದಾರೆ. ರಾಜಾನುಕುಂಟೆ ವ್ಯಾಪ್ತಿಯ ತಿಮ್ಮೇಗೌಡ, ಹರೀಶ, ಮೂರ್ತಿ, ರಾಜು ಎಂಬವರನ್ನು ಬಂಧಿಸಿದ್ದು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಇಸ್ಪೀಟ್ ಗಲಾಟೆ: ರೌಡಿ ಸೇರಿ ನಾಲ್ವರ ಬಂಧನ, ಮಾರಕಾಸ್ತ್ರ ಜಪ್ತಿ - Bangalore crime case
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಟೀಂ ಅರೆಸ್ಟ್
ಇದನ್ನೂ ಓದಿ:ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ: ಭೀತಿಯಿಂದ ಹೊರಗೆ ಓಡಿ ಬಂದ ಜನ
ಕಳೆದ ವಾರ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ವಿಚಾರವಾಗಿ ಗಲಾಟೆ ನಡೆದಿತ್ತು. ಈ ವೇಳೆ ಬಾಗಲಗುಂಟೆ ಮೂಲದ ಪವನ್ ಎಂಬಾತನ ಹೊಟ್ಟೆಗೆ ಬಿಯರ್ ಬಾಟಲಿಯಿಂದ ಇರಿಯಲಾಗಿದೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.