ಕರ್ನಾಟಕ

karnataka

ETV Bharat / city

ಕನ್ನಡ ಚಿತ್ರರಂಗದ ಬಹುಬೇಡಿಕೆ ಸಂಭಾಷಣೆಕಾರ ಗುರು ಕಶ್ಯಪ್ ಇನ್ನಿಲ್ಲ.. - Ramesh Arvind tweet

ರಮೇಶ್ ಅರವಿಂದ್ ಅಭಿನಯದ 'ಪುಷ್ಪಕ ವಿಮಾನ', ಗಣೇಶ್​ ಅಭಿನಯದ 'ಸುಂದರಾಂಗ ಜಾಣ', ಪ್ರಿಯಾಂಕಾ ಉಪೇಂದ್ರ ಅಭಿನಯದ 'ದೇವಕಿ', ಪ್ರಜ್ವಲ್ ದೇವರಾಜ್ ಅಭಿನಯದ 'ಇನ್ಸ್‌ಪೆಕ್ಟರ್‌ ವಿಕ್ರಂ' ಸೇರಿದಂತೆ ಅನೇಕ ಸಿನಿಮಾಗಳಿಗೆ ಡೈಲಾಗ್ ರೈಟರ್ ಆಗಿ ಕೆಲಸ ಮಾಡಿದ್ದ ಗುರು ಕಶ್ಯಪ್ ಕೊನೆಯುಸಿರೆಳೆದಿದ್ದಾರೆ.

Guru Kashyap
Guru Kashyap

By

Published : Sep 14, 2021, 10:43 AM IST

ಬೆಂಗಳೂರು:ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ಸಂಭಾಷಣೆಕಾರ (ಡೈಲಾಗ್​ ರೈಟರ್)ರಾಗಿ ಗುರುತಿಸಿಕೊಂಡಿದ್ದ ಗುರು ಕಶ್ಯಪ್ (45) ಅವರು ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ್ದಾರೆ.

ಕನ್ನಡದ ಹಲವಾರು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್ ಅವರಿಗೆ ಕಳೆದ ರಾತ್ರಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯದಲ್ಲೇ ಇಹಲೋಕ ತ್ಯಜಿಸಿದ್ದಾರೆ ಎನ್ನಲಾಗಿದೆ.

ರಮೇಶ್ ಅರವಿಂದ್ ಅಭಿನಯದ 'ಪುಷ್ಪಕ ವಿಮಾನ', ಗಣೇಶ್​ ಅಭಿನಯದ 'ಸುಂದರಾಂಗ ಜಾಣ', ಪ್ರಿಯಾಂಕಾ ಉಪೇಂದ್ರ ಅಭಿನಯದ 'ದೇವಕಿ', ಪ್ರಜ್ವಲ್ ದೇವರಾಜ್ ಅಭಿನಯದ 'ಇನ್ಸ್‌ಪೆಕ್ಟರ್‌ ವಿಕ್ರಂ' ಸೇರಿದಂತೆ ಅನೇಕ ಸಿನಿಮಾಗಳಿಗೆ ಗುರು ಕಶ್ಯಪ್ ಡೈಲಾಗ್ ರೈಟರ್ ಆಗಿ ಕೆಲಸ ಮಾಡಿದ್ದಾರೆ.

ನಿಧನಕ್ಕೂ ಮುನ್ನ ಅನೇಕ ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದ ಅವರು ಧನಂಜಯ ನಟನೆಯ 'ಮಾನ್ಸೂನ್​ ರಾಗ', ಶಿವರಾಜ್​ಕುಮಾರ್​ ಅಭಿನಯದ 'ಬೈರಾಗಿ', 'ವ್ಹೀಲ್​ ಚೇರ್​ ರೋಮಿಯೋ’ ಮುಂತಾದ ಸಿನಿಮಾಗಳಿಗೆ ಗುರು ಕಶ್ಯಪ್ ಡೈಲಾಗ್​ ಬರೆಯುತ್ತಿದ್ದರು. ಆ ಸಿನಿಮಾಗಳು ತೆರೆಕಾಣುವುದಕ್ಕೂ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ.

ಗುರು ಕಶ್ಯಪ್

ಗುರು ಕಶ್ಯಪ್ ತಮ್ಮ ಪತ್ನಿ ಮತ್ತು ಮಗಳನ್ನು ಅಗಲಿದ್ದು, ಇವರ ಸಾವಿಗೆ ನಟ, ನಿರ್ದೇಶಕ ರಮೇಶ್ ಅರವಿಂದ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. "ನಾನು ಕಂಡಂತ ಅತಿ ಪ್ರತಿಭಾವಂತರಲ್ಲಿ ಗುರುಕಶ್ಯಪ್ ಕೂಡ ಒಬ್ಬರು. ಪುಷ್ಪಕ ವಿಮಾನ, ಸುಂದರಾಂಗಜಾಣ,100 ಚಿತ್ರಗಳ ಡೈಲಾಗ್​ ರೈಟರ್.. ಸಂಜೆ ನಗುತ್ತಾ ನಾರ್ಮಲ್​ ಆಗಿ ಇದ್ದವರು ರಾತ್ರಿ ಜೀವ ತೊರದಿದ್ದಾರೆ! ಒಬ್ಬ ಒಳ್ಳೆಯ ವ್ಯಕ್ತಿ, ಶ್ರೇಷ್ಠ ಬರಹಗಾರರನ್ನು ಕಳೆದು ಕೊಂಡಿದ್ದೇವೆ. ಓಂ ಶಾಂತಿ" ಎಂದು ರಮೇಶ್ ಅರವಿಂದ್ ಟ್ವೀಟ್​ ಮಾಡಿ, ಅವರೊಂದಿಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ABOUT THE AUTHOR

...view details