ಕರ್ನಾಟಕ

karnataka

By

Published : Jul 2, 2022, 5:49 PM IST

ETV Bharat / city

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆ.. ಭರವಸೆ ಸಾಲದು, ಅಧಿಕೃತ ಆದೇಶ ಹೊರಡಿಸಿ ಎಂದ ಸಿದ್ದರಾಮಯ್ಯ

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್​ ಪಕ್ಷ ಬೆಂಬಲ ಸೂಚಿಸಿದ್ದು, ಸಿದ್ದರಾಮಯ್ಯ ಹೋರಾಟದಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

siddaramaiah
ಸಿದ್ದರಾಮಯ್ಯ

ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಮೌಖಿಕವಾಗಿ ಭರವಸೆನೀಡಿದ್ದರು. ಆದರೆ ಪೌರ ಕಾರ್ಮಿಕರು ಲಿಖಿತ ರೂಪದಲ್ಲಿ ಆದೇಶ ಬರುವವರೆಗೂ ಪ್ರತಿಭಟನೆ ಮುಂದುವರೆಸೂವುದಾಗಿ ತಿಳಿಸಿದ್ದರು. ಇಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮುಷ್ಕರಕ್ಕೆ ತಮ್ಮ ಬೆಂಬಲ ಸೂಚಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.

ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ವಿಚಾರದಲ್ಲಿ ಸರ್ಕಾರ ಬಾಯಿ ಮಾತಿನ ಭರವಸೆ ನೀಡಿದರೆ ಸಾಲದು, ಬೇಡಿಕೆಗಳನ್ನು ಈಡೇರಿಸಿ ಅಧಿಕೃತ ಆದೇಶ ಹೊರಡಿಸಬೇಕು. ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಬರವಣಿಗೆಯಲ್ಲಿ ಭರವಸೆ ನೀಡಿದೆ. ಆದರೆ ಅಧಿಕೃತ ಆದೇಶ ಹೊರಡಿಸಿಲ್ಲ. ಈ ರೀತಿ ಮೋಸ ಮಾಡದೆ ಕೂಡಲೇ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸುವುದಾಗಿ ತಿಳಿಸಿದರು.

ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೌರ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಸರ್ಕಾರ ಈಡೇರಿಸಿತ್ತು. ವೇತನ ಹೆಚ್ಚಳ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಿತ್ತು. ಆದರೆ, ಇಂದಿನ ಬಿಜೆಪಿ ಸರ್ಕಾರ ಪೌರ ಕಾರ್ಮಿಕರ ಹಿತ ಕಾಯುವಲ್ಲಿ ವಿಫಲವಾಗಿದೆ. ಬರವಣಿಗೆಯಲ್ಲಿ ನೀಡಿರುವ ಭರವಸೆ ಕಣ್ಣೊರೆಸುವ ತಂತ್ರವಾಗಿದೆ. ಚಳವಳಿಯನ್ನು ವಾಪಸ್ ಪಡೆಯಲಿ ಎಂಬ ಕಾರಣಕ್ಕೆ ಸರ್ಕಾರ ಈ ನಾಟಕವಾಡಿದೆ ಎಂದು ಆರೋಪಿಸಿದರು.

ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ :ಬೆಂಗಳೂರು: ಪೌರ ಕಾರ್ಮಿಕರ ಜೊತೆಗಿನ ಸರ್ಕಾರದ ಸಂಧಾನ ಸಫಲ

ABOUT THE AUTHOR

...view details