ಬೆಂಗಳೂರು: ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎರಡನೇ ಬಾರಿ ಅನಾರೋಗ್ಯದ ಕಾರಣ ನೀಡಿ ನಗರಕ್ಕೆ ಹಿಂದಿರುಗಿದ್ದಾರೆ.
ಭಾನುವಾರ ಆರಂಭವಾದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಮೊದಲ ದಿನವೇ ಮಧ್ಯಾಹ್ನದ ಹೊತ್ತಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿಗೆ ವಾಪಸಾಗಿದ್ದರು. ಮಂಗಳವಾರ (ಮೂರನೇ ದಿನ)ದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಬುಧವಾರ ಮಧ್ಯಾಹ್ನದವರೆಗೂ ತಮ್ಮ ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಹೆಜ್ಜೆ ಹಾಕಿದ್ದರು. ಆದರೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆ, ಇಂದು ಮಧ್ಯಾಹ್ನದ ನಂತರ ಆರಂಭವಾದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳದೇ ನಗರಕ್ಕೆ ವಾಪಸಾಗಿದ್ದಾರೆ.
ಆರೋಗ್ಯ ಸಮಸ್ಯೆ-ಬೆಂಗಳೂರಿಗೆ ವಾಪಸ್:
2013ರಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಬಳ್ಳಾರಿಗೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಅವರಿಗೆ ಇದೀಗ ವಯೋಸಹಜ ಸಮಸ್ಯೆಗಳು ಹಾಗೂ ಕೋವಿಡ್ ನಂತರ ಕಾಡುತ್ತಿರುವ ಹಲವು ತೊಂದರೆಗಳಿಂದಾಗಿ ಶಾರೀರಿಕವಾಗಿ ದಣಿದಿದ್ದಾರೆ. ಮೊದಲಿನಂತೆ ಉತ್ಸಾಹದಿಂದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ.
ಮೇಲಿಂದ ಮೇಲೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು, ಅವರಿಗೆ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ನಾಲ್ಕನೇ ದಿನದ ಪಾದಯಾತ್ರೆ ಮುಕ್ತಾಯಕ್ಕೂ ಮುನ್ನವೇ ಎರಡನೇ ಬಾರಿ ಬೆಂಗಳೂರಿಗೆ ಹಿಂದುರಿಗಿದ್ದಾರೆ.
ಹೈಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ: