ಕರ್ನಾಟಕ

karnataka

ETV Bharat / city

ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್​​​​​​​​​​ ವಂಚನೆ ಪ್ರಕರಣ: 11 ಜನ ಸಿಐಡಿ ವಶಕ್ಕೆ - ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್​​​​​​​​​​ ವಂಚನೆ ಪ್ರಕರಣ

ಬಸವನಗುಡಿಯ ಶ್ರೀ ಗುರು ರಾಘವೇ‌ದ್ರ ಕೋ-ಆಪರೇಟಿವ್​ ಸಹಕಾರ ಬ್ಯಾಂಕಿನಲ್ಲಿ‌ ನಡೆದ ಅವ್ಯಹಾರ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿ ಅವ್ಯವಹಾರದಲ್ಲಿ ಭಾಗಿಯಾಗಿದ್ದ 11 ಜನರನ್ನು ವಶಕ್ಕೆ ಪಡೆದಿದ್ದಾರೆ.

sri-guru-raghavendra-co-operative-bank-fraud-case
ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್​​​​​​​​​​ ವಂಚನೆ ಪ್ರಕರಣ

By

Published : Aug 4, 2020, 8:02 PM IST

ಬೆಂಗಳೂರು: ಬಸವನಗುಡಿಯ ಶ್ರೀ ಗುರು ರಾಘವೇ‌ದ್ರ ಕೋ-ಆಪರೇಟಿವ್​ ಸಹಕಾರ ಬ್ಯಾಂಕಿನಲ್ಲಿ‌ ನಡೆದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳ ಮೇಲೆ ಸಿಐಡಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ‌ನಡೆಸಿದರು. ದಾಳಿ ವೇಳೆ ಅಕ್ರಮ ಅವ್ಯವಹಾರ ಸಾಬೀತು ಹಿನ್ನೆಲೆ ಹೆಚ್ಚಿನ ತನಿಖೆಗಾಗಿ 11 ಜನರನ್ನ ವಶಕ್ಕೆ ಪಡೆದಿದ್ದಾರೆ.

ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್​​​​​​​​​​ ವಂಚನೆ ಪ್ರಕರಣ

ಆರೋಪಿಗಳು ಸುಳ್ಳು ದಾಖಲೆ ನೀಡಿ ಕೋಟಿ ಕೋಟಿ ರೂ. ಸಾಲ ಪಡೆದಿದ್ದರು. ಸದ್ಯ ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ 15 ಕಡೆಗಳಲ್ಲಿ ಇರುವ ಇವರ ಮನೆ, ಕಚೇರಿ‌ ಮೇಲೆ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ಮಾಡಿ, ಆರೋಪಿಗಳನ್ನ ಬಂಧಿಸಿದ್ದಾರೆ. ಸದ್ಯ ವಸಂತನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಗಳ ಕೊರೊನಾ ಟೆಸ್ಟ್ ನಡೆಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗೆ ಅನುಮತಿ ಪಡೆದು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಹಿನ್ನೆಲೆ

ಬಸವನಗುಡಿಯ ಶ್ರೀ ಗುರು ರಾಘವೇ‌ದ್ರ ಕೋ ಆಪರೇಟಿವ್ ಸಹಕಾರ ಬ್ಯಾಂಕಿನಲ್ಲಿ‌ ಅವ್ಯವಹಾರ ನಡೆದಿರುವ ಕಾರಣ ಇತ್ತೀಚೆಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ‌ ನಡೆಸಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು.

ಅಲ್ಲದೆ ಬ್ಯಾಂಕಿನ ಮಾಜಿ ಸಿಇಒ ವಾಸುದೇವ್ ಮಯ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಸದ್ಯ ಈ ಹಗರಣದ ಆರೋಪ ಹೊತ್ತಿರುವ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆ ಮುಂದುವರೆಸಿದೆ.

For All Latest Updates

TAGGED:

ABOUT THE AUTHOR

...view details