ಕರ್ನಾಟಕ

karnataka

By

Published : May 11, 2020, 2:40 PM IST

ETV Bharat / city

ಕ್ವಾರಂಟೈನ್​ನಲ್ಲಿರಬೇಕಾದವರು ಮಹಿಳೆಯರಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ: ಶ್ರೀರಾಮುಲು

ಪಾದರಾಯನಪುರದಲ್ಲಿ ಕ್ವಾರಂಟೈನ್​​ನಲ್ಲಿರಬೇಕಾಗಿದ್ದ ಮಹಿಳೆಯರು ಹೊರಗೆ ಹೋಗಿದ್ದರೆಂಬ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಶ್ರೀರಾಮುಲು ಟ್ವೀಟ್​ ಮಾಡಿದ್ದಾರೆ. ಯಾರೇ ಆದರೂ ತನಿಖೆ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Sriramulu
ಬಿ.ಶ್ರೀರಾಮುಲು

ಬೆಂಗಳೂರು: ಪಾದರಾಯನಪುರದಲ್ಲಿ ಕ್ವಾರಂಟೈನ್​ಲ್ಲಿರಬೇಕಾಗಿದ್ದ ಕೆಲವು ಮಹಿಳೆಯರು ಹೊರಗೆ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಬಿ.ಶ್ರೀರಾಮುಲು ಟ್ವೀಟ್​​
ನಾಡಿನ ಜನರ ಆರೋಗ್ಯದ ವಿಷಯದಲ್ಲಿ ಆಟವಾಡುವ ಇಂತಹ ಘಟನೆ ಸಹಿಸಲು ಅಸಾಧ್ಯ. ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗುತ್ತದೆ. ನಾಡಿನ ಜನತೆಯ ಆರೋಗ್ಯ ಕಾಪಾಡುವುದೇ ನಮ್ಮ ಮುಖ್ಯ ಧ್ಯೇಯ ಎಂದು ಟ್ವೀಟ್ ಮೂಲಕ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details