ಬೆಂಗಳೂರು:ಎಸ್ಎಸ್ಎಲ್ಸಿ ಪರೀಕ್ಷೆಗೆ ಸಮಸ್ಯೆ ಆಗಬಾರದು ಅಂತಾ ಸುಮ್ಮನಿದ್ದೇವೆ. ಪರೀಕ್ಷೆ ನಂತರ ಕೊರೊನಾ ವೇಗ ಕುಗ್ಗಿಸಲು ಇನ್ನಷ್ಟು ಕಠಿಣ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಸಂಬಂಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಗಳಿಗೆ ಅಧಿಕಾರ ಕೊಡಲಾಗಿದೆ. ಕೋವಿಡ್ ತಡೆ ಕುರಿತು ನಿನ್ನೆಯಿಂದ ಸಭೆ ಮಾಡಲಾಗಿದೆ. ಕೋವಿಡ್ ಹೆಚ್ಚಳಕ್ಕೆ ತಕ್ಕಂತೆ ಅಗತ್ಯ ಕ್ರಮ ಕೈಗೊಳ್ಳಲಾಗ್ತಿದೆ. ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕು ಲಕ್ಷಣ ಇಲ್ಲದವರನ್ನು ಅಡ್ಮಿಟ್ ಮಾಡಿಕೊಳ್ಳುತ್ತಿದ್ದಾರೆ. ಅವರಿಗೂ ಚಾರ್ಜ್ ಮಾಡುತ್ತಿದ್ದಾರೆ. ಇದು ಆಗಬಾರದು. ಬರುವಂತಹ ಸೋಂಕಿತರಿಗೆ ಯಾವುದೇ ಸಮಸ್ಯೆ ಆಗಬಾರದು. ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.