ಬೆಂಗಳೂರು:ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್ಡಿಪಿಐ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಷರೀಫ್ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಪ್ ಇಂಡಿಯಾ(ಎಸ್ಡಿಪಿಐ) ಇವರ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಪ್ ಕೊಡಲಿಪೇಟೆ ಮಾತನಾಡಿ, ಮೋದಿ ಸರ್ಕಾರದಲ್ಲಿ ಹೋರಾಟಗಾರರನ್ನು ದಮನಿಸಲಾಗುತ್ತಿದೆ. ಇದನ್ನು ಎಸ್ಡಿಪಿಐ ತೀವ್ರವಾಗಿ ಖಂಡಿಸುತ್ತದೆ ಎಂದರು.
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ನಮ್ಮ ಬೆಂಗಳೂರು ಅಧ್ಯಕ್ಷ ಷರೀಫ್ ಹಾಗೂ ಕಾರ್ಯಕರ್ತರನ್ನು ಬಂಧಿಸಿ 400 ಅಮಾಯಕ ಕುಟುಂಬಗಳು ಕಣ್ಣೀರು ಹಾಕುವಂತೆ ಮಾಡಿದೆ. ಆದರೂ ನಮಗೆ ಕಾನೂನಿನ ಮೇಲೆ ಪೂರ್ತಿ ನಂಬಿಕೆ ಇದೆ ಎಂದರು.