ಬೆಂಗಳೂರು: ಸಮ್ಮಿಶ್ರ ಸರ್ಕಾರದ ರೀತಿಯಲ್ಲಿ ನಮ್ಮ ಸರ್ಕಾರದ ಸಂಪುಟ ಇರಬಾರದು ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ. ಸಿಎಂ ದೆಹಲಿ ಭೇಟಿ ನಂತರ ಸಂಪುಟ ರಚನೆಯಾಗಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ರೀತಿ ನಾವು ಸರ್ಕಾರವನ್ನು ನಡೆಸಬಾರದು. ಉತ್ತಮವಾಗಿ ಸರ್ಕಾರ ನಡೆಸಬೇಕು. ಒಳ್ಳೆಯ ಸಚಿವ ಸಂಪುಟ ರಚಿಸಬೇಕು ಎನ್ನುವ ಕಾರಣಕ್ಕೆ ಸಂಪುಟ ರಚನೆ ವಿಳಂಬವಾಗುತ್ತಿದೆ. ಅಗಸ್ಟ್ 5 ಅಥವಾ 6 ರಂದು ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗಲಿದ್ದು, ಅವರು ವಾಪಸ್ ಬಂದ ನಂತರ ಸಚಿವ ಸಂಪುಟ ರಚನೆ ಆಗಲಿದೆ ಎಂದರು.