ಕರ್ನಾಟಕ

karnataka

ETV Bharat / city

ರಾಜ್ಯ ಸರ್ಕಾರ ಪಂಚೇಂದ್ರಿಯಗಳನ್ನು ಕಳೆದುಕೊಂಡಿದೆ: ಸಿದ್ದರಾಮಯ್ಯ ಕಿಡಿ

ಸಚಿವರು ಹೆದರಿಕೊಂಡು ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗುತ್ತಿಲ್ಲ. ಹೋದರೆ ಸಂತ್ರಸ್ತರು ಮುತ್ತಿಗೆ ಹಾಕ್ತಾರೆ ಎಂಬ ಭಯ ಅವರನ್ನು ಕಾಡುತ್ತಿದೆ. ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು ಯಾವುದೂ ಇಲ್ಲ, ಪಂಚೇಂದ್ರಿಯಗಳನ್ನು ಕಳೆದು‌ಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

By

Published : Oct 24, 2019, 4:18 PM IST

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ನೆರೆ‌ ಪರಿಹಾರ ಸಂಬಂಧ ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು ಯಾವುದೂ ಇಲ್ಲ. ಪಂಚೇಂದ್ರಿಯಗಳನ್ನು ಕಳೆದು‌ಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶದಲ್ಲಿ ಸಂತ್ರಸ್ತರಿಗೆ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ. ಮನೆ ಕಳೆದುಕೊಂಡವರಿಗೆ ಕೇವಲ 10 ಸಾವಿರ ರೂ. ಕೊಟ್ಟಿದ್ದು ಬಿಟ್ಟರೆ ಯಾವುದೇ ಪರಿಹಾರ ಕೊಟ್ಟಿಲ್ಲ. ಸಚಿವರು ಹೆದರಿಕೊಂಡು ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗುತ್ತಿಲ್ಲ. ಹೋದರೆ ಸಂತ್ರಸ್ತರು ಮುತ್ತಿಗೆ ಹಾಕ್ತಾರೆ ಎಂಬ ಭಯ ಅವರನ್ನು ಕಾಡುತ್ತಿದೆ. ಈ ಸರ್ಕಾರ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವುದರಿಂದ ಜನ ಕಷ್ಟ ಅನುಭವಿಸುವಂತಾಗಿದೆ. ಸದನದಲ್ಲಿ ಸಿಎಂ ಯಾವುದಕ್ಕೂ ಸ್ಪಂದಿಸಲಿಲ್ಲ. ಕೇವಲ ಹತ್ತು ನಿಮಿಷ ಉತ್ತರ ನೀಡಿ ಸದನದಿಂದ ತೆರಳಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಕಡಿತ ಮಾಡಿದ್ದ ಅನುದಾನದ ಆದೇಶ ವಾಪಸ್ ಪಡೆಯುವುದಾಗಿ ಸದನದಲ್ಲಿ ಹೇಳಿದ್ದರು. ಆದರೆ ಇದುವರೆಗೂ ಆ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಪಕ್ಷ ಹಾಳು ಮಾಡಿದವರನ್ನು ವಾಪಸ್​​ ಸೇರಿಸಲ್ಲ:

ಉಪ ಚುನಾವಣೆಗೆ ಕೋರ್ಟ್ ತೀರ್ಪು ನೋಡಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಅನರ್ಹರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಈ ಬಗ್ಗೆ ಸದನದಲ್ಲೇ ನಾನು ಹೇಳಿದ್ದೆ. ಪಕ್ಷ ಹಾಳು ಮಾಡಿದವರನ್ನು ವಾಪಸ್​​​​ ಸೇರಿಸಿಕೊಳ್ಳುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಕಟೀಲ್​​ಗೆ ಪ್ರಬುದ್ಧತೆ ಇಲ್ಲ:

ಹೈಕಮಾಂಡ್ ಕೈ-ಕಾಲು ಹಿಡಿದು ಪ್ರತಿಪಕ್ಷ ನಾಯಕರಾಗಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಯಿಸಲು ನಿರಾಕರಿಸಿದ ಸಿದ್ದರಾಮಯ್ಯ, ಅಂಥವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ. ಅವರೆಲ್ಲಾ ಚೈಲ್ಡಿಶ್​ ತರಹ, ಪ್ರಬುದ್ಧತೆ ಬೆಳೆದಿಲ್ಲ ಎಂದು ತಿರುಗೇಟು ನೀಡಿದರು.

For All Latest Updates

TAGGED:

ABOUT THE AUTHOR

...view details