ಕರ್ನಾಟಕ

karnataka

By

Published : Jul 27, 2021, 5:49 PM IST

Updated : Jul 27, 2021, 6:16 PM IST

ETV Bharat / city

ಕೇಂದ್ರದಿಂದ ಮೂವರು ವೀಕ್ಷಕರ ತಂಡ ರಾಜ್ಯಕ್ಕೆ ಆಗಮನ: ನಾಳೆ ಮಧ್ಯಾಹ್ನದ ವೇಳೆಗೆ ಮುಂದಿನ ಸಿಎಂ ಘೋಷಣೆ

ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ಚುರುಕುಗೊಂಡಿದ್ದು, ವೀಕ್ಷಕರಾಗಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್‌, ಕಿಶನ್‌ ರೆಡ್ಡಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಮಧ್ಯಾಹ್ನದ ವೇಳೆಗೆ ಮುಂದಿನ ಸಿಎಂ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ.

Union Ministers and BJP observers for Karnataka, G Kishan Reddy and Dharmendra Pradhan arrive in Bengaluru
ಕೇಂದ್ರದಿಂದ ಮೂವರ ವೀಕ್ಷಕರ ತಂಡ ರಾಜ್ಯಕ್ಕೆ ಆಗಮನ; ನಾಳೆ ಮಧ್ಯಾಹ್ನದ ವೇಳೆಗೆ ಮುಂದಿನ ಸಿಎಂ ಘೋಷಣೆ

ಬೆಂಗಳೂರು:ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌. ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆಗಳು ಚುರುಕುಗೊಂಡಿವೆ. ವೀಕ್ಷಕರಾಗಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್‌, ಕಿಶನ್‌ ರೆಡ್ಡಿ ಇಂದು ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ಪ್ರಧಾನ್‌ ಹಾಗೂ ರೆಡ್ಡಿ ಅವರೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂವರನ್ನು ರಾಜ್ಯದ ನಾಯಕರು ಸ್ವಾಗತಿಸಿದರು. ಇಲ್ಲಿಂದ ನೇರವಾಗಿ ಕಾವೇರಿ ನಿವಾಸಕ್ಕೆ ತೆರಳಿ ನಿರ್ಗಮಿತ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ಕೆ.ಕೆ. ಗೆಸ್ಟ್‌ಹೌಸ್‌ಗೆ ತೆರಳಿದ್ದಾರೆ. ವೀಕ್ಷಕರ ತಂಡಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಾಥ್‌ ನೀಡಿದ್ದಾರೆ.

ಕೇಂದ್ರದಿಂದ ಮೂವರು ವೀಕ್ಷಕರ ತಂಡ ರಾಜ್ಯಕ್ಕೆ ಆಗಮನ: ನಾಳೆ ಮಧ್ಯಾಹ್ನದ ವೇಳೆಗೆ ಮುಂದಿನ ಸಿಎಂ ಘೋಷಣೆ

ಬಿಜೆಪಿ ಶಾಸಕಾಂಗ ಸಭೆ

ದೆಹಲಿಯಿಂದ ರಾಜ್ಯಕ್ಕೆ ಆಗಮಿಸಿರುವ ವೀಕ್ಷಕರ ತಂಡ ಇಂದು ಹಮ್ಮಿಕೊಂಡಿರುವ ಬಿಜೆಪಿ ಶಾಸಕರ ಸಭೆಯಲ್ಲಿ ಭಾಗವಹಿಸಿದ್ದು, ಎಲ್ಲರ ಅಭಿಪ್ರಾಯ ಪಡೆದು ಇಂದು ರಾತ್ರಿ ಅಥವಾ ನಾಳೆ ಮಧ್ಯಾಹ್ನದೊಳಗೆ ಮುಂದಿನ ಮುಖ್ಯಮಂತ್ರಿ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಲಿಂಗಾಯತ ಸಮುದಾಯವರನ್ನೇ ಮುಂದಿನ ಸಿಎಂ ಆಗಿ ಘೋಷಿಸುವ ಸಾಧ್ಯತೆ ಇದೆ. ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ, ಮುರುಗೇಶ್‌ ನಿರಾಣಿ ಹಾಗೂ ಶಾಸಕ ಅರವಿಂದ್‌ ಬೆಲ್ಲದ್‌ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ಹೇಳಲಾಗ್ತಿದೆ.

Last Updated : Jul 27, 2021, 6:16 PM IST

ABOUT THE AUTHOR

...view details