ಕರ್ನಾಟಕ

karnataka

ETV Bharat / city

ಗ್ಯಾಸ್ ಬೆಲೆ ಏರಿಕೆ ವಿರುದ್ಧ ವಾಟಾಳ್ ಕಿಡಿ: ಖಾಲಿ ಸಿಲಿಂಡರ್ ಇಟ್ಟು ಪ್ರತಿಭಟನೆ - Vatal nagaraj protest

ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೂ ಕೂಡ ಜನಸಾಮಾನ್ಯರು ಆರಾಮಾಗಿ ಕುಳಿತಿದ್ದಾರೆ. ಜನರಿಗೆ ಅನ್ಯಾಯವಾದ್ರೆ ನಾನು ಹೋರಾಟ ಮಾಡುತ್ತೇನೆ ಎಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

Vatal nagaraj
ಖಾಲಿ ಸಿಲಿಂಡರ್ ಇಟ್ಟು ಪ್ರತಿಭಟನೆ ಮಾಡಿದ ವಾಟಾಳ್ ನಾಗರಾಜ್​

By

Published : Jul 2, 2021, 7:52 PM IST

ಬೆಂಗಳೂರು: ಗ್ಯಾಸ್ ಬೆಲೆ ಏರಿಕೆಗೆ ವಾಟಾಳ್ ನಾಗರಾಜ್ ವಿರೋಧ ವ್ಯಕ್ತಪಡಿಸಿದ್ದು,​ ಇಂದು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಖಾಲಿ ಸಿಲಿಂಡರ್ ಇಟ್ಟು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಜನರ ಪರಿಸ್ಥಿತಿಯನ್ನು ನೋಡಿ ನೋವಾಗುತ್ತದೆ. ಜನರಿಗಾಗಿ ಹೋರಾಟ ಮಾಡಿ ನನ್ನ ಜೀವನವನ್ನು ಅರ್ಪಣೆ ಮಾಡಿದ್ದೇನೆ. ನನ್ನದು ನಿತ್ಯ, ನಿರಂತರ ಹೋರಾಟ. ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರು ಕೂಡ ಜನರು ಆರಾಮಾಗಿ ಕುಳಿತಿದ್ದಾರೆ. ಆದರೆ ಜನರಿಗೆ ಅನ್ಯಾಯವಾದ್ರೆ ನಾನು ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಖಾಲಿ ಸಿಲಿಂಡರ್ ಇಟ್ಟು ಪ್ರತಿಭಟನೆ ಮಾಡಿದ ವಾಟಾಳ್ ನಾಗರಾಜ್​

ಕಳೆದ 6 ತಿಂಗಳಲ್ಲಿ ಎಲ್ಲಾ ಅಗತ್ಯ ವಸ್ತುಗಳ ದರ ಏರಿಕೆ ಮಾಡಲಾಗಿದೆ. ಸರ್ಕಾರ ಒಂದು ಕಡೆ ಕೊರೊನಾ ಪ್ಯಾಕೇಜ್ ಕೊಟ್ಟು ಮತ್ತೊಂದು ಕಡೆ ತೆರಿಗೆ ಹಾಕುವ ಮೂಲಕ ಹಣ ವಸೂಲಿ ಮಾಡುತ್ತಿದೆ. ಕೇಂದ್ರದ ವಿರುದ್ಧ ಜನಸಾಮಾನ್ಯರು ಮಾತನಾಡಬೇಕು. ದರ ಏರಿಕೆಯನ್ನು ಹಿಂಪಡೆಯದಿದ್ದರೆ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ABOUT THE AUTHOR

...view details