ಕರ್ನಾಟಕ

karnataka

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ ಸೂಚನೆ

By

Published : Apr 23, 2021, 12:40 AM IST

ಈಗಾಗಲೇ ಪರೀಕ್ಷೆಗಳನ್ನು ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಕೋವಿಡ್‌ ಪರಿಣಾಮದಿಂದಾಗಿ ಹಾಸ್ಟೆಲ್‌ನಿಂದ ಹೊರಹಾಕಬಾರದು ಎಂದು ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Whoever writing exam right now, don't send out from hostel: DCM Dr. Ashwath narayan
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ ಸೂಚನೆ

ಬೆಂಗಳೂರು: ಎಂಜಿನಿಯರಿಂಗ್‌, ಡಿಪ್ಲೊಮೋ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಅಲ್ಲಿಂದ ಹೊರ ಕಳುಹಿಸುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

"ಹಾಸ್ಟೆಲ್‌ಗಳಲ್ಲಿ ಇದ್ದುಕೊಂಡು ಎಂಜಿನಿಯರಿಂಗ್‌, ಡಿಪ್ಲೊಮೋ, ಪಾಲಿಟೆಕ್ನಿಕ್‌, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಬಾರದು. ಪರೀಕ್ಷೆ ಮುಗಿಯುವ ತನಕ ಅವರಿಗೆ ಊಟ, ವಸತಿ ಸೇರಿದಂತೆ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಮುಂದುವರಿಸಬೇಕು ಎಂದು ಡಿಸಿಎಂ ಸೂಚಿಸಿದ್ದಾರೆ. ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂತಲೂ ಹೇಳಿದ್ದಾರೆ.

ABOUT THE AUTHOR

...view details