ಕರ್ನಾಟಕ

karnataka

ETV Bharat / city

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರ ಬಂಧನ: 123 ಗ್ರಾಂ ಬಂಗಾರ ವಶಕ್ಕೆ

ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಎಂಟು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

By

Published : Jul 3, 2021, 11:19 PM IST

arrest
arrest

ದಾವಣಗೆರೆ: ಎಂಟು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರನ್ನು ದಾವಣಗೆರೆ ಪೊಲೀಸರು ಬಂಧಿಸಿ, ಆರೋಪಿಗಳಿಂದ 123 ಗ್ರಾಂ ಬಂಗಾರವನ್ನು ವಶಕ್ಕೆ ಪಡೆದಿದ್ದಾರೆ. ಸೈಯ್ಯದ್ ಮುಬಾರಕ್‌ ಹಾಗೂ ನದೀಮ್ ಬಂಧಿತ ಆರೋಪಿಗಳು. ಬಂಧಿತರಿಂದ ಚಿನ್ನದ ಸರ‌ ಹಾಗೂ ದ್ವಿಚಕ್ರವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾಯುವಿಹಾರಕ್ಕೆ ತೆರಳಿದಾಗ ಚಿನ್ನ ಎಗರಿಸಿದ್ದ ಖದೀಮರು:ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣ್ಣಿಗೆರೆ ಗ್ರಾಮದಲ್ಲಿ ವಾಯುವಿಹಾರಕ್ಕೆಂದು ಭಾಗ್ಯ ಹನುಮಂತಪ್ಪ ಎಂಬ ಮಹಿಳೆಯೊಬ್ಬರು ತೆರಳಿದಾಗ ಖದೀಮರು ಮಾಂಗಲ್ಯಸರವನ್ನು ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಭಾಗ್ಯ ಹನುಮಂತಪ್ಪ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಬೀಗ ಹಾಕಿದ ಮನೆಗಳೇ ಇವರ ಟಾರ್ಗೆಟ್​.. ವೃದ್ಧೆ ಸೇರಿ 7 ಖತರ್ನಾಕ್ ಮನೆಗಳ್ಳರ ಗ್ಯಾಂಗ್ ಅರೆಸ್ಟ್​

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ: ಭದ್ರಾವತಿ ರಸ್ತೆಯಲ್ಲಿ ಗಾಂಜಾ ಮಾರಾಟ‌ ಮಾಡುತ್ತಿದ್ದ ಇಬ್ಬರನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 10 ಸಾವಿರ ರೂ. ಮೌಲ್ಯದ 860 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರವಾಹನವನ್ನು ವಶಕ್ಕೆ ಪಡೆದಿದ್ದಾರೆ. ಫೈರೋಜ್ ಷಾ ಹಾಗು ಸೈಯದ್ ರಾಝೀಕ್​ನನ್ನು ಬಂಧಿತ ಆರೋಪಿಗಳಾಗಿದ್ದಾರೆ.

ABOUT THE AUTHOR

...view details