ದಾವಣಗೆರೆ: ಸಿದ್ದರಾಮಯ್ಯ ಪ್ರತಿಪಕ್ಷದಲ್ಲಿದ್ದುಕೊಂಡು ಮಾತನಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಕೋವಿಡ್ ನಿಯಂತ್ರಣ ಮಾಡಲು ಸರ್ಕಾರ ವಿಫಲವಾಗಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯನವರು ಸರ್ಕಾರಕ್ಕೆ ಸಲಹೆ ಸೂಚನೆ ನೀಡಬೇಕು. ಕೊರೊನಾ ಎನ್ನುವುದು ಇಡೀ ಪ್ರಪಂಚಕ್ಕೆ ಬಂದಿದೆ, ಬೇರೆ ರಾಜ್ಯಗಳಲ್ಲಿ ಕೂಡ ಹೆಚ್ಚಾಗಿದೆ. ಮುಖ್ಯಮಂತ್ರಿ ರಾಜ್ಯಪಾಲರ ಜೊತೆ ಸಭೆ ನಡೆಸಿದ್ದಾರೆ, ಪ್ರತಿಪಕ್ಷದವರು ಕೂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಸಾಧಕ ಬಾಧಕಗಳನ್ನು ನೋಡಿಕೊಂಡು ಕಠಿಣ ಕ್ರಮಕ್ಕೆ ಒತ್ತು ನೀಡುತ್ತೇವೆ ಎಂದು ತಿಳಿಸಿದರು.