ದಾವಣಗೆರೆ :ದಾಯಾದಿಗಳ ಕಲಹಕ್ಕೆ ಬೆಳೆದು ನಿಂತ ಅಡಿಕೆ ತೋಟ ನಾಶವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ಎಂಬುವರಿಗೆ ಸೇರಿದ 15 ಗುಂಟೆಯಲ್ಲಿದ್ದ 20 ವರ್ಷದ ಅಡಿಕೆ ಮರಗಳನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ನಾಶ ಮಾಡಿದ್ದಾರೆ.
ದಾಯಾದಿ ಕಲಹ- ಅಡಿಕೆ ತೋಟ ನಾಶ .. ಘಟನೆಯ ವಿವರ :ರೈತರಾದ ವೆಂಕಟೇಶಪ್ಪ, ವೀರೇಶಪ್ಪ ಹಾಗೂ ಹನುಮಂತಪ್ಪ ಮೂವರು ಸಹೋದರರು. ಈ ಮೂವರು ಸಹೋದರರ ಪೈಕಿ ವೆಂಕಟೇಶ್ ಅವರ ಪಾಲಿನ ಅಡಿಕೆ ಮರಗಳು ಸಮೃದ್ಧವಾಗಿ ಬೆಳೆದಿದ್ದವು.
ಇದರಿಂದ ತೋಟ ಬಿಟ್ಟುಕೊಡುವಂತೆ ಸಹೋದರರಾದ ವೀರೇಶ್ ಹಾಗೂ ಹನುಮಂತಪ್ಪ ಇಬ್ಬರು ವೆಂಕಟೇಶ್ಗೆ ಒತ್ತಾಯಿಸಿದ್ದರು. ತೋಟ ಬಿಟ್ಟುಕೊಡಲು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಅಡಿಕೆ ಮರಗಳನ್ನು ನಾಶ ಮಾಡಿದ್ದಾರೆ ಎನ್ನಲಾಗ್ತಿದೆ.
ಮಕ್ಕಳಂತೆ ಬೆಳೆಸಿದ್ದ ಅಡಿಕೆ ಮರಗಳು ನೆಲಕಚ್ಚಿದ್ದರಿಂದ ವೆಂಕಟೇಶ್ಗೆ ದಿಕ್ಕು ತೋಚದಂತಾಗಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ವೆಂಕಟೇಶ್ ತನ್ನ ಸಹೋದರಿಬ್ಬರ ವಿರುದ್ಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಚನ್ನಗಿರಿ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದ್ದು, ಇಬ್ಬರು ತಲೆ ಮರೆಸಿಕೊಂಡಿದ್ದಾರೆ.
ಇದನ್ನೂ ಓದಿ:ಅಕ್ರಮವಾಗಿ ದೈವಸ್ಥಾನ ಪ್ರವೇಶಿಸಿ ಅಂಗಣ ಸುತ್ತ ರಕ್ತ ಹರಿಸಿದ್ದ ವ್ಯಕ್ತಿ ಬಂಧನ