ದಾವಣಗೆರೆ: ಲಾಕ್ಡೌನ್ ಹಿನ್ನೆಲೆಯಲ್ಲಿ ಬಡವರು, ನಿರ್ಗತಿಕರು, ನಿರಾಶ್ರಿತರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಹೊನ್ನಾಳಿ ಪಟ್ಟಣದಲ್ಲಿ ನಿತ್ಯವೂ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡುತ್ತಿದ್ದಾರೆ. ಜೊತೆಗೆ ಮಾಸ್ಕ್ ಸಹ ವಿತರಿಸುತ್ತಿದ್ದಾರೆ.
ನಿತ್ಯವೂ 4 ರಿಂದ 5 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಉಚಿತವಾಗಿ ಸಾವಿರಾರು ಜನರಿಗೆ ಊಟದ ವ್ಯವಸ್ಥೆ ಮಾಡುವ ಮೂಲಕ ಜನರ ಸಂಕಷ್ಟಕ್ಕೆ ನೆರವಾಗುತ್ತಿದ್ದಾರೆ. ಊಟ ತಯಾರಾದ ಬಳಿಕ ಒಮ್ಮೆ ಪರಿಶೀಲನೆ ನಡೆಸುತ್ತಾರೆ. ಬಳಿಕ ರೇಣುಕಾಚಾರ್ಯ ದಂಪತಿ ಸ್ವತಃ ಮುಂದೆ ನಿಂತು ಎಲ್ಲರಿಗೂ ಊಟ ವಿತರಿಸುತ್ತಾರೆ.