ಕರ್ನಾಟಕ

karnataka

ETV Bharat / city

ಭದ್ರಾ ಕಾಲುವೆಗೆ ಹಾರಿ ವೃದ್ಧ ದಂಪತಿ ಅತ್ಮಹತ್ಯೆ: ಕಾಪಾಡಲು ಹೋದ ಯುವಕ ನೀರುಪಾಲು! - ದಾವಣಗೆರೆಯಲ್ಲಿ ವೃದ್ಧರ ಆತ್ಮಹತ್ಯೆ

ವೃದ್ಧ ದಂಪತಿ ಭದ್ರಾ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರನ್ನು ಕಾಪಾಡಲು ಹೋದ ಯುವಕ ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

commits-suicide
ದಂಪತಿ ಅತ್ಮಹತ್ಯೆ

By

Published : Apr 27, 2022, 3:44 PM IST

ದಾವಣಗೆರೆ:ಜೀವನದಲ್ಲಿ ಜುಗುಪ್ಸೆಗೊಂಡು ವೃದ್ಧ ದಂಪತಿ ಭದ್ರಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರನ್ನು ಕಾಪಾಡಲು ಹೋದ ಯುವಕನೂ ಕೂಡ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇಗರದಹಳ್ಳಿ ಬಸಾಪುರ ಜರುಗಿದೆ.

ವೃದ್ಧ ದಂಪತಿ ಚನ್ನಗಿರಿ ತಾಲೂಕಿನ ಅಂಚಿನ ಸಿದ್ದಾಪುರ ಬಳಿ ನೀರಿಗೆ ಬಿದ್ದಿದ್ದಾರೆ. ಇದನ್ನು ಕಂಡ ಯುವಕನೊಬ್ಬ ಕಾಪಾಡಲು ಹೋಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ವೃದ್ಧ ದಂಪತಿಯ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದರು. ಆದರೆ, ಯುವಕ ಇನ್ನೂ ಪತ್ತೆಯಾಗಿಲ್ಲ. ಜೀವ ಕಳೆದುಕೊಂಡ ವೃದ್ಧ ದಂಪತಿ ಮತ್ತು ಯುವಕನ ಬಗ್ಗೆ ಮಾಹಿತಿ‌ ಲಭ್ಯವಾಗಿಲ್ಲ.

ಯುವಕನ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ‌ ಶೋಧ ಕಾರ್ಯ ನಡೆಸುತ್ತಿದ್ದಾರೆ. ದಂಪತಿಯ ಮೃತದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸುದೀಪ್​ ಕಾರ್ಯಕ್ರಮದಲ್ಲಿಅನುಚಿತ ವರ್ತನೆ.. ಯುವಕನಿಗೆ ಕಪಾಳ ಮೋಕ್ಷ ಮಾಡಿದ ಮಹಿಳಾ PSI

ABOUT THE AUTHOR

...view details