ಕರ್ನಾಟಕ

karnataka

By

Published : Apr 15, 2022, 2:14 PM IST

ETV Bharat / city

ಈಶ್ವರಪ್ಪ ಆರೋಪಿ ಅಲ್ಲದಿದ್ರೂ ಆರೋಪಿ ಸ್ಥಾನದಲ್ಲಿದ್ದಾರೆ : ಶಾಸಕ ಎಂಪಿ ರೇಣುಕಾಚಾರ್ಯ

ನಮ್ಮ ಸರ್ಕಾರ ಮುಕ್ತವಾಗಿ ತನಿಖೆ ನಡೆಸಲಿದೆ. ಈಶ್ವರಪ್ಪ ಆರೋಪದಿಂದ ಮುಕ್ತರಾಗುತ್ತಾರೆ. ಕಾಂಗ್ರೆಸ್‌ನವರು ಗುತ್ತಿಗೆದಾರರ ಸಂಘದಿಂದ ಪ್ರಧಾನ ಮಂತ್ರಿ, ಪಕ್ಷದ ವರಿಷ್ಠರಿಗೆ ಪತ್ರ ಬರೆಸುತ್ತಿದ್ದೀರಿ. ಈ ಪತ್ರದ ಡ್ರಾಪ್ಟ್ ರೆಡಿಯಾಗಿದ್ದು ಕಾಂಗ್ರೆಸ್ ಮುಖಂಡರ ಮನೆಯಲ್ಲಿ. ಕಾಂಗ್ರೆಸ್​​ನವರಿಗೆ ಯಾವುದೇ ವಿಷಯ ಸಿಗದೆ ಈಗ ಈಶ್ವರಪ್ಪ ಅವರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ‌ ಎಂದು ದೂರಿದರು..

MLA MP Renukacharya
ಶಾಸಕ ಎಂಪಿ ರೇಣುಕಾಚಾರ್ಯ

ದಾವಣಗೆರೆ :ಸಚಿವ ಕೆ ಎಸ್ ಈಶ್ವರಪ್ಪ ಆರೋಪಿ ಅಲ್ಲದಿದ್ರೂ ಅವರು ಆರೋಪಿ ಸ್ಥಾನದಲ್ಲಿದ್ದಾರೆ. ಅವರನ್ನು ಬಂಧಿಸಿ ಎಂದು ಹೇಳುವವರಿಗೆ ನಾಚಿಕೆಯಾಗಬೇಕು ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದರು. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿ ಅವರು, ಈಶ್ವರಪ್ಪ ಅವರು ಹಿರಿಯ ಮುಖಂಡರು. ಅವರು ಯಾವುದೇ ಅಪರಾಧ ಮಾಡಿಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದಾರೆ‌ ಎಂದರು.

ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರುಸಚಿವ ಈಶ್ವರಪ್ಪ ಪರ ಬ್ಯಾಟಿಂಗ್‌ ನಡೆಸಿರುವುದು..

ನಮ್ಮ ಸರ್ಕಾರ ಮುಕ್ತವಾಗಿ ತನಿಖೆ ನಡೆಸಲಿದೆ. ಈಶ್ವರಪ್ಪ ಆರೋಪದಿಂದ ಮುಕ್ತರಾಗುತ್ತಾರೆ. ಕಾಂಗ್ರೆಸ್‌ನವರು ಗುತ್ತಿಗೆದಾರರ ಸಂಘದಿಂದ ಪ್ರಧಾನ ಮಂತ್ರಿ, ಪಕ್ಷದ ವರಿಷ್ಠರಿಗೆ ಪತ್ರ ಬರೆಸುತ್ತಿದ್ದೀರಿ. ಈ ಪತ್ರದ ಡ್ರಾಪ್ಟ್ ರೆಡಿಯಾಗಿದ್ದು ಕಾಂಗ್ರೆಸ್ ಮುಖಂಡರ ಮನೆಯಲ್ಲಿ. ಕಾಂಗ್ರೆಸ್​​ನವರಿಗೆ ಯಾವುದೇ ವಿಷಯ ಸಿಗದೆ ಈಗ ಈಶ್ವರಪ್ಪ ಅವರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ‌ ಎಂದು ದೂರಿದರು.

ಈಗಾಗಲೇ ಜನರು ಕಾಂಗ್ರೆಸ್​​ನವರನ್ನು ಮೂಲೆ ಗುಂಪು ಮಾಡಿದ್ದಾರೆ. ಮಾಜಿ ಸಿಎಂ ಬಿ ಎಸ್​​ ಯಡಿಯೂರಪ್ಪ, ಈಶ್ವರಪ್ಪ, ಶಂಕರಮೂರ್ತಿ ಪ್ರಶ್ನಾತೀತ ನಾಯಕರು. ಯಾವುದೇ ಕಾರಣಕ್ಕೂ ಸೈಡ್‌ಲೈನ್ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳ ಕಗ್ಗೊಲೆಯಾಗಿದೆ. ಈಶ್ವರಪ್ಪನವರೇ ‌ನೀವು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ನಿಮ್ಮ ಜತೆ ಪಕ್ಷ ಇದೆ. ತನಿಖೆ ಬಳಿಕ ಅವರು ನಿರ್ದೋಷಿಯಾಗಲಿದ್ದಾರೆ. ಮತ್ತೆ ಸಚಿವರಾಗಲಿದ್ದಾರೆ ಎಂದು ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಯಾರೋ ಮಾಡಿದ ಅಪರಾಧಕ್ಕೆ ಈಶ್ವರಪ್ಪ ತಲೆದಂಡ.. ಆರೋಪ ಮುಕ್ತರಾಗಿ ಮತ್ತೆ ಸಚಿವರಾಗ್ತಾರೆ.. ಮಾಜಿ ಸಿಎಂ ಬಿಎಸ್​​ವೈ

For All Latest Updates

ABOUT THE AUTHOR

...view details