ಕರ್ನಾಟಕ

karnataka

By

Published : Sep 20, 2019, 12:01 PM IST

Updated : Sep 20, 2019, 12:35 PM IST

ETV Bharat / city

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ: ಜಗಳೂರು ತಾಲೂಕಿನ ಸಮಸ್ಯೆ ಹೇಳಿಕೊಂಡ ಶಾಸಕರು

ಜಗಳೂರು ತಾಲೂಕಿನಲ್ಲಿ ಹನಿ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲೂಕಿನ 87 ಗ್ರಾಮಗಳಿಗೆ ನಿತ್ಯ 138 ಟ್ಯಾಂಕರ್​ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಇನ್ನು ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಸರ್ಕಾರ ಕೆಲವೊಂದು ಮೇವು ಕೇಂದ್ರಗಳನ್ನು ಮುಚ್ಚಿದ್ದು, ಅವುಗಳನ್ನು ಮುಚ್ಚದಂತೆ ಸಚಿವರು ಕ್ರಮ ಕೈಗೊಳ್ಳಬೇಕೆಂದು ಜಿಲ್ಲೆಯ ಶಾಸಕರು ಮನವಿ ಮಾಡಿಕೊಂಡರು.

ಜಿಲ್ಲಾ ಪ್ರಗತಿ ಪರಿಶೀಲನ ಸಭೆ

ದಾವಣಗೆರೆ:ಜಿಲ್ಲೆಯಲ್ಲಿ ಜಗಳೂರು ಅತ್ಯಂತ ಹಿಂದುಳಿದ ತಾಲೂಕು. ಈ ತಾಲೂಕಿನಲ್ಲಿ ಇಂದಿಗೂ ಕೂಡ ಹನಿ ನೀರಿಗೂ ಹಾಹಾಕಾರವಿದೆ. ಜನರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. ಅತ್ತ ಜಾನುವಾರುಗಳಿಗೆ ಮೇವು ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲೆಯ ಶಾಸಕರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರ ಮುಂದೆ ತೋಡಿಕೊಂಡರು.

ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನ ಸಭೆ

ಜಿಲ್ಲೆಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲೆಯ ಶಾಸಕರು ಜಿಲ್ಲೆಯ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟರು. ಜಗಳೂರು ತಾಲೂಕಿನಲ್ಲಿ ಹನಿ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಜನರು ಅನಿವಾರ್ಯವಾಗಿ ಟ್ಯಾಂಕರ್ ನೀರಿನ ಮೊರೆ ಹೋಗಿದ್ದು, ಸುಮಾರು ಜಗಳೂರು ತಾಲೂಕಿನ 87 ಗ್ರಾಮಗಳಿಗೆ ನಿತ್ಯ 138 ಟ್ಯಾಂಕರ್​ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಟ್ಯಾಂಕರ್​ ನೀರಿನಲ್ಲಿ ಹುಳ, ಹುಪ್ಪಟೆಗಳು ಸಿಗುತ್ತಿದ್ದು, ಜನರು ಅದೇ ನೀರನ್ನು ಬಳಸುವ ಅನಿವಾರ್ಯತೆ ಎದುರಾಗಿದೆ ಎಂದು ಜಗಳೂರು ಶಾಸಕ ಎಸ್.ವಿ.ರಾಮಚಂದ್ರಪ್ಪ ಸಚಿವರ ಎದುರು ಬೇಸರ ವ್ಯಕ್ತಪಡಿಸಿದರು.

ಇನ್ನು ಜಾನುವಾರುಗಳಿಗೆ ತಾಲೂಕಿನಲ್ಲಿ ಮೂರು ಕಡೆ ಮೇವಿನ ಬ್ಯಾಂಕ್ ಓಪನ್ ಮಾಡಿದ್ದು, ಅದರಲ್ಲಿ ಎರಡನ್ನೂ ಮುಚ್ಚಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರ ಗೋ ಶಾಲೆಗಳನ್ನು ಮುಚ್ಚಬಾರದೆಂದು ಸಭೆಯಲ್ಲಿ ಮನವಿ ಮಾಡಿದರು. ಜಗಳೂರು ತಾಲೂಕು ಸೇರಿದಂತೆ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲೂ 13 ಹಳ್ಳಿಯ ಜನರು ಇಂದಿಗೂ ಟ್ಯಾಂಕರ್ ನೀರನ್ನು ಅವಲಂಬಿಸಿದ್ದಾರೆ. ಈ ಭಾಗದಲ್ಲಿ ಮಳೆ ಸಮರ್ಪಕವಾಗಿ ಆದರೂ ಅಂತರ್ ಜಲದ ಮಟ್ಟ ಕುಸಿದಿರುವುದರಿಂದ ಜನರಿಗೆ ನೀರು ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೆ ಟ್ಯಾಂಕರ್ ನೀರು ನಿಲ್ಲಿಸದಂತೆ ಶಾಸಕರು ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಶಾಸಕರ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಯಾವುದೇ ಕಾರಣಕ್ಕೂ ನೀರು ಪೂರೈಕೆ ನಿಲ್ಲಿಸದಂತೆ ಎಚ್ಚರಿಕೆ ನೀಡಿದರಲ್ಲದೇ ಜಗಳೂರಿನಲ್ಲಿರುವ ಮೂರು ಗೋ ಶಾಲೆಗಳನ್ನು ಮುಚ್ಚದೇ ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಪೂರೈಕೆ ಮಾಡುವಂತೆ ಅಧಿಕಾರಿಗೆ ಸೂಚನೆ ನೀಡಿದರು.

Last Updated : Sep 20, 2019, 12:35 PM IST

ABOUT THE AUTHOR

...view details