ETV Bharat Karnataka

ಕರ್ನಾಟಕ

karnataka

ETV Bharat / city

ಅಲ್ಪಸಂಖ್ಯಾತರ ಓಲೈಕೆಗಾಗಿ ಎಷ್ಟು ದಿನ ಸುಳ್ಳು ಸುದ್ದಿ ಹಬ್ಬಿಸುತ್ತೀರಿ?: ರೇಣುಕಾಚಾರ್ಯ - ಆರ್‌ಎಸ್​ಎಸ್ ಕೈವಾಡ

ಸಿದ್ದರಾಮಯ್ಯ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ಸರಣಿ ಟ್ವೀಟ್ ಮಾಡಿ, ಆಲ್ ಖೈದಾ ಉಗ್ರಗಾಮಿ ಸಂಘಟನೆ ಮುಖ್ಯಸ್ಥನನ್ನು ಮುಂದೊಂದು ದಿನ ವೀರ ಸ್ವಾತಂತ್ರ್ಯ ಹೋರಾಟಗಾರರಾಗಿ ಕಂಡರೂ ಅಚ್ಚರಿಯಿಲ್ಲ ಎಂದು ಕಿಚಾಯಿಸಿದ್ದಾರೆ.

Mla mp renukacharya
Mla mp renukacharya
author img

By

Published : Apr 7, 2022, 4:46 PM IST

ದಾವಣಗೆರೆ:ಹಿಜಾಬ್​ ವಿವಾದಕ್ಕೆ ಸಂಬಂಧಿಸಿದಂತೆ ಮಂಡ್ಯದ ವಿದ್ಯಾರ್ಥಿನಿಯನ್ನು ಬೆಂಬಲಿಸಿ ಅಲ್​ಖೈದಾ ಉಗ್ರನ ವಿಡಿಯೋ ಹಿಂದೆ ಆರ್‌ಎಸ್​ಎಸ್ ಕೈವಾಡ ಇದೆ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಆಲ್ ಖೈದಾ ಉಗ್ರಗಾಮಿ ಸಂಘಟನೆ ಮುಖ್ಯಸ್ಥನನ್ನು ಸಿದ್ದರಾಮಯ್ಯ ಮುಂದೊಂದು ದಿನ ವೀರ ಸ್ವಾತಂತ್ರ್ಯ ಹೋರಾಟಗಾರರಾಗಿ ಕಂಡರೂ ಅಚ್ಚರಿಯಿಲ್ಲ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರೇಣುಕಾಚಾರ್ಯ, ಇಂತಹ ಸೈತನಾರನ್ನೇ ಪೋಷಿಸಿಕೊಂಡು ಬಂದಿರುವುದಕ್ಕೆ ಇತಿಹಾಸವೇ ಸಾಕ್ಷಿಯಾಗಿದೆ. ನಿಮ್ಮ (ಸಿದ್ದರಾಮಯ್ಯ) ಹೇಳಿಕೆಯಲ್ಲಿ ನಮಗೆ ಹೊಸದೇನೂ ಕಾಣುತ್ತಿಲ್ಲ. ಅತಿಯಾದ ಓಲೈಕೆಯ ಪರಿಣಾಮ 2018 ರ ಚುನಾವಣೆಯಲ್ಲಿ ನಿಮ್ಮ ಪಕ್ಷದ ಸ್ಥಿತಿ ಏನಾಯಿತು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ. ಇದು ಆರ್​ಎಸ್​​ಎಸ್ ಸೃಷ್ಟಿ ಎನ್ನುವ ನಿಮಗೆ ಆತ್ಮಸಾಕ್ಷಿ ಎಂಬುದಿದ್ದರೆ, ಅಲ್‌ಖೈದಾದ ಮುಖವಾಣಿ ಅಸ್ -ಸಾಹಬ್ ಎಂಬ ಸಾಮಾಜಿಕ ಜಾಲತಾಣದಲ್ಲಿ ಅಮನ್-ಅಲ್ -ಜವಾಹಿರಿಯ ವಿಡಿಯೋ ಒಂದು ಬಾರಿ ನೋಡಿ ನಂತರ ಸಂಘ ಪರಿವಾರದ ಬಗ್ಗೆ ಮಾತನಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಪಸಂಖ್ಯಾತರ ಓಲೈಕೆಗಾಗಿ ಇನ್ನು ಎಷ್ಟು ದಿನ ಇಂತಹ ಹಸಿ-ಬಿಸಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತೀರಿ?. ನೀವು ಹೇಳಿದ್ದನ್ನೆಲ್ಲಾ ಒಪ್ಪಲು ಕರ್ನಾಟಕದ ಜನ ಕಿವಿ ಮೇಲೆ ಲಾಲ್ ಬಾಗ್ ಹೂವು ಇಟ್ಟುಕೊಂಡಿದ್ದಾರಾ?. ಎಷ್ಟೇ ಆಗಲಿ ಮೀನು ತಿಂದು ಧರ್ಮಸ್ಥಳಕ್ಕೆ ಹೋಗಿ ಬಂದವರು ನೀವು. 2018 ರ ಚುನಾವಣೆಯಲ್ಲಿ ಆದ ಗತಿಯೇ 2023ರ ಚುನಾವಣೆಯಲ್ಲಿ ಆಗುತ್ತದೆ. ನಿಮ್ಮ ತುಷ್ಟೀಕರಣಕ್ಕೆ ಜನತೆ ತಕ್ಕ ಪಾಠ ಕಲಿಸುವುದರಲ್ಲಿ ಸಂದೇಹವೇ ಬೇಡ. ಕಾದು ನೋಡಿ, ಕಾಮಾಲೆ ಕಣ್ಣಿಗೆ ಕಾಣುವುದೆಲ್ಲವೂ ಹಳದಿ ಎಂಬಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಾಂಗ್‌ ನೀಡಿದ್ದಾರೆ.

ಇದನ್ನೂ ಓದಿ:ಅಲ್‌ಖೈದಾ ವಿಡಿಯೋ ಹಿಂದೆ ಆರ್‌ಎಸ್‌ಎಸ್‌: 'ಸಿದ್ದರಾಮಯ್ಯ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ'

ABOUT THE AUTHOR

...view details